AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ವರುಣಾರ್ಭಟ: ಪ್ರವಾಹದಲ್ಲಿ ಸಿಲುಕಿದವರ ರೋಚಕ ರಕ್ಷಣಾ ಕಾರ್ಯಾಚರಣೆ

[lazy-load-videos-and-sticky-control id=”8grwzxBbftw”] ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಸುವರ್ಣಾ ನದಿ ಉಕ್ಕಿಹರಿಯುತ್ತಿದೆ. ಇದರಿಂದಾಗಿ ನದಿ ದಡದಲ್ಲಿರುವ ಜಲವಿದ್ಯುತ್ ಯೋಜನೆ ಘಟಕದಲ್ಲಿ ಇಬ್ಬರು ಸಿಬ್ಬಂದಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಹಿರಿಯಡ್ಕದ ಬಜೆ ಸಮೀಪ ಅಣೆಕಟ್ಟಿನ ಪಕ್ಕದಲ್ಲಿ ಈ ಘಟಕವಿದ್ದು, ಇಬ್ಬರು ಸಿಬ್ಬಂದಿಗಳು ಪಂಪ್ ಹೌಸ್​ನಲ್ಲಿ ರಾತ್ರಿ ಮಲಗಿದ್ದಾರೆ. ಆದರೆ ರಾತ್ರಿ ಇದಕ್ಕಿದ್ದಂತೆ, ಸುವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪಂಪ್ ಹೌಸ್​ನ ನಾಲ್ಕು ಮೂಲೆಯಲ್ಲೂ ನೀರು ಆವರಿಸಿದೆ. ಹೀಗಾಗಿ ಸಿಬ್ಬಂದಿ ತಮ್ಮ ಜೀವ ಉಳಿಸಿಕೊಳ್ಳಲು […]

ಉಡುಪಿಯಲ್ಲಿ ವರುಣಾರ್ಭಟ: ಪ್ರವಾಹದಲ್ಲಿ ಸಿಲುಕಿದವರ ರೋಚಕ ರಕ್ಷಣಾ ಕಾರ್ಯಾಚರಣೆ
ಸಾಧು ಶ್ರೀನಾಥ್​
|

Updated on:Sep 20, 2020 | 1:41 PM

Share

[lazy-load-videos-and-sticky-control id=”8grwzxBbftw”]

ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಸುವರ್ಣಾ ನದಿ ಉಕ್ಕಿಹರಿಯುತ್ತಿದೆ. ಇದರಿಂದಾಗಿ ನದಿ ದಡದಲ್ಲಿರುವ ಜಲವಿದ್ಯುತ್ ಯೋಜನೆ ಘಟಕದಲ್ಲಿ ಇಬ್ಬರು ಸಿಬ್ಬಂದಿಗಳು ಸಿಕ್ಕಿಹಾಕಿಕೊಂಡಿದ್ದಾರೆ.

ಹಿರಿಯಡ್ಕದ ಬಜೆ ಸಮೀಪ ಅಣೆಕಟ್ಟಿನ ಪಕ್ಕದಲ್ಲಿ ಈ ಘಟಕವಿದ್ದು, ಇಬ್ಬರು ಸಿಬ್ಬಂದಿಗಳು ಪಂಪ್ ಹೌಸ್​ನಲ್ಲಿ ರಾತ್ರಿ ಮಲಗಿದ್ದಾರೆ. ಆದರೆ ರಾತ್ರಿ ಇದಕ್ಕಿದ್ದಂತೆ, ಸುವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪಂಪ್ ಹೌಸ್​ನ ನಾಲ್ಕು ಮೂಲೆಯಲ್ಲೂ ನೀರು ಆವರಿಸಿದೆ.

ಹೀಗಾಗಿ ಸಿಬ್ಬಂದಿ ತಮ್ಮ ಜೀವ ಉಳಿಸಿಕೊಳ್ಳಲು ಜನರೇಟರ್ ಮೇಲೆ ಹತ್ತಿ ಕುಳಿತಿದ್ದಾರೆ. ನದಿಯ ಭೋರ್ಗರೆತದ ಕಾರಣದಿಂದಾಗಿ ಕಾರ್ಯಾಚರಣೆ ವಿಳಂಬವಾಗಿದ್ದು, ರಕ್ಷಣಾ ಸಿಬ್ಬಂದಿ ಪ್ರವಾಹ ತಗ್ಗಿದ ಬಳಿಕೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಲು ತೀರ್ಮಾನಿಸಿದ್ದಾರೆ.

ಮಲ್ಪೆಯಲ್ಲಿ 3 ಬೋಟ್ ಮುಳುಗಡೆ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮಲ್ಪೆಯಲ್ಲಿ 3 ಬೋಟ್​ಗಳು ಮುಳುಗಡೆಯಾಗಿವೆ. ಹೀಗಾಗಿ, ಮೀನುಗಾರರು ಕಲ್ಲು ಬಂಡೆಯ ಮೇಲೆ ಆಶ್ರಯ ಪಡೆದು ಬಳಿಕ ಸುರಕ್ಷಿತವಾಗಿ ದಡ ಸೇರಿದ್ದಾರೆ. ಬೋಟ್​ಗಳು ಮುಳುಗಡೆಯಾಗಿದ್ದರಿಂದ ಮೀನುಗಾರರಿಗೆ ಲಕ್ಷಾಂತರ ರೂ ನಷ್ಟವುಂಟಾಗಿದೆ.

ಅಗತ್ಯವಿರುವ ಸ್ಥಳಗಳಿಗೆ NDRF ತಂಡವನ್ನು ರವಾನಿಸುವಂತೆ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ DC ಗೆ ಸೂಚನೆ ನೀಡಿದ್ದಾರೆ. ಜೊತೆಗೆ, ನೆರೆಪೀಡಿತ ಕುಕ್ಕೆಹಳ್ಳಿ ಹಾಗೂ ಇನ್ನಿತರ ಕಡೆಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ ಕಲ್ಸಂಕ ಬೈಲಕೆರೆಯಲ್ಲಿ ಪ್ರವಾಹದಲ್ಲಿ ಸಿಲುಕಿದ್ದವರನ್ನು ಕ್ರೇನ್ ಮೂಲಕ ರಕ್ಷಣೆ ಮಾಡಲಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ವೃದ್ಧರು, ಮಹಿಳೆಯರು ಹಾಗೂ ಮಕ್ಕಳನ್ನ ನಗರಸಭೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

Published On - 12:09 pm, Sun, 20 September 20

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ