ಸಿಲ್ಕ್ ಬೋರ್ಡ್ ಮೆಟ್ರೋ ಸ್ಟೇಶನ್ ಬಳಿಯ ರಸ್ತೆ ಇನ್ನೂ ಜಲಾವೃತ, ನೀರು ರಾಜಾಕಾಲುವೆಗೆ ಹರಿಸಲು ಹರಸಾಹಸ

ಅರುಣ್​ ಕುಮಾರ್​ ಬೆಳ್ಳಿ

Updated on: May 20, 2025 | 1:33 PM

ಸಿಲ್ಕ್ ಬೋರ್ಡ್ ಮೆಟ್ರೋ ಸ್ಟೇಶನ್ ಬಳಿಯ ರಸ್ತೆ ಮೇಲೆ ಮೊಣಕಾಲಿಗಿಂತ ಹೆಚ್ಚಿನ ಮಟ್ಟದವರೆಗೆ ನೀರು ನಿಂತಿದೆ ಎಂದು ನಮ್ಮ ವರದಿಗಾರ ಹೇಳುತ್ತಾರೆ. ನಿನ್ನೆ ಸಂಗ್ರಹವಾಗಿದ್ದ ನೀರನ್ನು ರಾಜಾ ಕಾಲುವೆ ಹರಿಬಿಟ್ಟಿದ್ದರೆ ಇವತ್ತು ಪ್ರಾಯಶಃ ಇಷ್ಟೊಂದು ನೀರು ಇರುತ್ತಿರಲಿಲ್ಲ. ಆದರೆ ಬಿಬಿಎಂಪಿಯ ಅಧಿಕಾರಿಗಳು ಗಡ್ಡಕ್ಕೆ ಬೆಂಕಿ ಹೊತ್ತಿಕೊಂಡ ನಂತರವೇ ನೀರಿಗಾಗಿ ಬಾವಿ ಅಗೆಯಲಾರಂಭಿಸುತ್ತಾರೆ.

ಬೆಂಗಳೂರು, ಮೇ 20: ಈ ಜಾಗವನ್ನು ನಿನ್ನೆ ನಿಮಗೆ ತೋರಿಸಲಾಗಿತ್ತು. ಬಿಎಂಟಿಸಿ ಬಸ್ (BMTC bus) ಮಳೆನೀರಲ್ಲಿ ಕೆಟ್ಟು ನಿಂತು ಬಸ್ಸಲ್ಲಿದ್ದ ಗರ್ಭಿಣಿ ಮಹಿಳೆ ಪರದಾಡಿದ ಸಿಲ್ಕ್ ಬೋರ್ಡ್ ಮೆಟ್ರೋ ಸ್ಟೇಶನ್ ಬಳಿಯ ಸ್ಥಳವಿದು. ಇಂದು ಬೆಳಗ್ಗೆ ಮತ್ತೇ ಧಾರಾಕಾರವಾಗಿ ಮಳೆ ಸುರಿದ ಕಾರಣ ರಸ್ತೆ ಮೇಲೆ ನಿನ್ನೆಗಿಂತ ಜಾಸ್ತಿ ಸಂಗ್ರಹಗೊಂಡಿದೆ. ನೀರು ಖಾಲಿ ಮಾಡುವ ಕೆಲಸವನನ್ನು ಬಿಬಿಎಂಪಿ ಸಿಬ್ಬಂದಿ ಮತ್ತು ಸಿವಿಲ್ ಡಿಫೆನ್ಸ್ ನವರು ಕೈಗೆತ್ತಿಕೊಂಡಿರುವರಾದರೂ ನೀರು ಇನ್ನೂ ಸಾಕಷ್ಟಿದೆ. ಪಂಪ್​ಸೆಟ್ ಮತ್ತು ಮೋಟಾರುಗಳನ್ನು ಬಳಸಿ ನೀರನ್ನ ಪಕ್ಕದಲ್ಲೇ ಹರಿಯುವ ರಾಜಾ ಕಾಲುವೆಗೆ ಹಾಕಲಾಗುತ್ತಿದೆ. ಈ ರಸ್ತೆಯನ್ನು ಬಂದ್ ಮಾಡಲಾಗಿದ್ದು ಟ್ರಾಫಿಕ್ ಅನ್ನು ಸರ್ಜಾಪುರ ರಸ್ತೆಗೆ ಡೈವರ್ಟ್ ಮಾಡಲಾಗಿದೆ.

ಇದನ್ನೂ ಓದಿ:  ಮಳೆಗೆ ಸಣ್ಣಪುಟ್ಟ ಸಮಸ್ಯೆ ಆಗೇ ಆಗುತ್ತೆ: ಬಿಬಿಎಂಪಿ ಆಯುಕ್ತ ಉಡಾಫೆ ಮಾತು!

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.