ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್: ಸಿನಿಮೀಯ ರೀತಿಯಲ್ಲಿ ಕಾರು ಚೇಸ್ ಮಾಡಿ ಬೈಕ್ ಸವಾರನ ಕಿರಿಕ್

Edited By:

Updated on: Jan 05, 2026 | 7:49 AM

ಬೆಂಗಳೂರು ವಿಮಾನ ನಿಲ್ದಾಣದ ಸೆಕ್ಯೂರಿಟಿ ಚೆಕಿಂಗ್ ಪಾಯಿಂಟ್ ಬಳಿ ಬೈಕ್ ಸವಾರನೊಬ್ಬ ಸಿನಿಮೀಯ ರೀತಿಯಲ್ಲಿ ಕ್ಯಾಬ್​ ಅನ್ನು ಚೇಸ್ ಮಾಡಿ ಅಡ್ಡಗಟ್ಟಿ ಕಿರಿಕ್ ನಡೆಸಿದ್ದಾನೆ. ನಂತರ ಭದ್ರತಾ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಘಟನೆಯ ವಿಡಿಯೋ ಮತ್ತೊಂದು ಕ್ಯಾಬ್ ಚಾಲಕನ ಮೊಬೈಲ್​ನಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.

ದೇವನಹಳ್ಳಿ, ಜನವರಿ 5: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎಬಿ) ಸೆಕ್ಯೂರಿಟಿ ಚೆಕಿಂಗ್ ಪಾಯಿಂಟ್​ ಬಳಿಯೇ ಸಿನಿಮೀಯ ರೋಡ್​ರೇಜ್ ನಡೆದಿದೆ. ಕ್ಯಾಬ್ ಚಾಲಕ ಮತ್ತು ಬೈಕ್ ಸವಾರನ ನಡುವೆ ಉಂಟಾದ ಕಿರಿಕ್ ಏರ್‌ಪೋರ್ಟ್‌ ರಸ್ತೆಯಲ್ಲಿ ಕಾರು–ಬೈಕ್ ಚೇಸ್‌ಗೆ ತಿರುಗಿದ್ದು, ಭದ್ರತಾ ಸಿಬ್ಬಂದಿ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಬೈಕ್ ಸವಾರ ಕ್ಯಾಬ್ ಅನ್ನು ಸಿನಿಮೀಯವಾಗಿ ಹಿಂಬಾಲಿಸಿಕೊಂಡು ಹೋಗಿ, ಏರ್‌ಪೋರ್ಟ್ ಸೆಕ್ಯೂರಿಟಿ ಚೆಕಿಂಗ್ ಪಾಯಿಂಟ್ ಬಳಿ ಅಡ್ಡಗಟ್ಟಿ ಗಲಾಟೆ ನಡೆಸಿದ್ದಾನೆ. ಹಿಂಬದಿ ಬರುತ್ತಿದ್ದ ಮತ್ತೊಂದು ಕಾರಿನ ಚಾಲಕನ ಮೊಬೈಲ್‌ ಕ್ಯಾಮರಾದಲ್ಲಿ ಘಟನೆಯ ವಿಡಿಯೋ ರೆಕಾರ್ಡ್ ಆಗಿದೆ.

ಬೈಕ್ ಸವಾರ ಕ್ಯಾಬ್ ಅನ್ನು ಹಿಂಬಾಲಿಸಿ ಅಡ್ಡಗಟ್ಟಿದ ವೇಳೆ, ಕಾರಿನೊಳಗಿದ್ದ ಯುವತಿ ಭಯಭೀತಳಾಗಿದ್ದಾಳೆ. ನಡು ರಸ್ತೆಯಲ್ಲಿ ನಡೆದ ಈ ಗಲಾಟೆಯಿಂದ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಸ್ಥಳಕ್ಕೆ ಧಾವಿಸಿದ ಏರ್‌ಪೋರ್ಟ್ ಭದ್ರತಾ ಸಿಬ್ಬಂದಿ ಇಬ್ಬರಿಗೂ ಬುದ್ಧಿವಾದ ಹೇಳಿ, ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ. ಈ ಘಟನೆ ದೇವನಹಳ್ಳಿ ವಿಮಾನ ನಿಲ್ದಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More