Sri Murali: ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಸಿಂಹ ಗರ್ಜನೆ ತೋರಿಸಿದ ಪುಟಾಣಿ ಪೋರ!

Madagaja: ನಟ ಶ್ರೀಮುರಳಿ ಮದಗಜ ಚಿತ್ರದ ಶೂಟಿಂಗ್ ಸಮಯದಲ್ಲಿ ಚಿತ್ರೀಕರಣ ನೋಡಲು ಬಂದ ಮಗುವಿನೊಂದಿಗೆ ಖುಷಿಯಿಂದ ಸಮಯ ಕಳೆದಿದ್ದು, ಮುದ್ದಾದ ಈ ವಿಡಿಯೊ ಈಗ ಎಲ್ಲರ ಮನಗೆದ್ದಿದೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.

Sri Murali: ರೋರಿಂಗ್ ಸ್ಟಾರ್ ಶ್ರೀಮುರಳಿಗೆ ಸಿಂಹ ಗರ್ಜನೆ ತೋರಿಸಿದ ಪುಟಾಣಿ ಪೋರ!
| Updated By: shivaprasad.hs

Updated on: Aug 17, 2021 | 12:48 PM

ಬಹು ನಿರೀಕ್ಷೆಯ ‘ಮದಗಜ’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ರೋರಿಂಗ್ ಸ್ಟಾರ್ ಶ್ರೀಮುರಳಿ, ಚಿತ್ರೀಕರಣ ನೋಡಲು ಬಂದ ಮಗುವಿನ ಜೊತೆಗೆ ಸಮಯ ಕಳೆದ ಮುದ್ದಾದ ವಿಡಿಯೊ ಎಲ್ಲರ ಗಮನ ಸೆಳೆದಿದೆ. ಆ ಸಂದರ್ಭದಲ್ಲಿ ಮಗುವಿನ ಜೊತೆಗೆ ಆಟವಾಡುತ್ತಾ, ತಮಾಷೆ ಮಾಡಿದ ಉಗ್ರಂ ನಟ, ತಾವು ಮಕ್ಕಳನ್ನು ಬೆಳೆಸಿದ ಕುರಿತೂ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರ ಮಗಳನ್ನು ಸುಮಾರು ಆರು ತಿಂಗಳಾಗುವವರೆಗೂ ಅವರು ಯಾರಿಗೂ ಮುಟ್ಟುವುದಕ್ಕೆ ಬಿಡುತ್ತಲೇ ಇರಲಿಲ್ಲವಂತೆ. ಒಂದು ಫೊಟೊವನ್ನೂ ತೆಗೆಯುವುದಕ್ಕೆ ಬಿಡುತ್ತಿರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ‘ಭರಾಟೆ’ ಸಿನಿಮಾದ ಬಳಿಕ ಶ್ರೀಮರಳಿ ನಟಿಸುತ್ತಿರುವ ‘ಮದಗಜ’ ಚಿತ್ರ ಕೂಡ ಪಕ್ಕಾ ಮಾಸ್​ ಶೈಲಿಯಲ್ಲಿ ಮೂಡಿಬರುತ್ತಿದೆ. ‘ಅಯೋಗ್ಯ’ ಚಿತ್ರ ನಿರ್ದೇಶಿಸಿ ಯಶಸ್ಸು ಕಂಡ ಮಹೇಶ್​ ಈಗ ‘ಮದಗಜ’ಕ್ಕೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್ ಭಾರಿ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ಶ್ರೀಮುರಳಿಗೆ ನಾಯಕಿಯಾಗಿ ಆಶಿಕಾ ರಂಗನಾಥ್​ ಅಭಿನಯಿಸುತ್ತಿದ್ದು, ಉಮಾಪತಿ ಶ್ರೀನಿವಾಸ ಗೌಡ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ:

ಶಿಲ್ಪಾ ಶೆಟ್ಟಿಯಿಂದಾಗಿ ತಾವು ಅನುಭವಿಸಿದ ಹಿಂಸೆ ಬಗ್ಗೆ ವಿವರಿಸಿ ಗಳಗಳನೆ ಅತ್ತ ತಂಗಿ ಶಮಿತಾ ಶೆಟ್ಟಿ

Kareena Kapoor: ಮಕ್ಕಳು ಫಿಲ್ಮ್ ಸ್ಟಾರ್ಸ್ ಆಗೋದು ತನಗಿಷ್ಟವಿಲ್ಲ ಎಂದ ಕರೀನಾ; ಹಾಗಾದರೆ ಕರೀನಾ ಕನಸೇನು?

(Roaring Star Sri Murali spends time with a kid in Shooting Spot and fans loved his kind gesture)

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ