AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಎಟಿಎಂನಲ್ಲಿರುವ ಸಿಸಿಟಿವಿ ಕೆಮೆರಾಗಳಿಗೆ ಕಪ್ಪುಮಸಿ ಸ್ಪ್ರೇ ಮಾಡಿ ₹ 18 ಲಕ್ಷ ದರೋಡೆಕಲಬುರಗಿ: ಎಟಿಎಂನಲ್ಲಿರುವ ಸಿಸಿಟಿವಿ ಕೆಮೆರಾಗಳಿಗೆ ಕಪ್ಪುಮಸಿ ಸ್ಪ್ರೇ ಮಾಡಿ ₹ 18 ಲಕ್ಷ ದರೋಡೆ

ಕಲಬುರಗಿ: ಎಟಿಎಂನಲ್ಲಿರುವ ಸಿಸಿಟಿವಿ ಕೆಮೆರಾಗಳಿಗೆ ಕಪ್ಪುಮಸಿ ಸ್ಪ್ರೇ ಮಾಡಿ ₹ 18 ಲಕ್ಷ ದರೋಡೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 09, 2025 | 2:42 PM

Share

ಬೀದರ್ ದರೋಡೆಕೋರರು ಮತ್ತು ಕೊಲೆಗಡುಕರನ್ನು ಈ ಭಾಗದ ಪೊಲೀಸರು ಸೆರೆಹಿಡಿದಿದ್ದರೆ ಕಲಬುರಗಿಯಲ್ಲಿ ದರೋಡೆ ಪ್ರಕರಣ ಪ್ರಾಯಶಃ ನಡೆಯುತ್ತಿರಲಿಲ್ಲ. ಇಲ್ಲಿ ಹಣ ದೋಚಿದ್ದು ಅದೇ ಗ್ಯಾಂಗ್ ಇಲ್ಲವೇ ಹರಿಯಾಣ ಮೂಲದವರು ಎಂದು ಶಂಕಿಸಲಾಗುತ್ತಿದೆ. ಈ ದರೋಡೆಕೋರರು ಮೊಬೈಲ್ ಫೋನ್​​​ಗಳನ್ನು ಬಳಸುವುದಿಲ್ಲವಾದ್ದರಿಂದ ಟ್ರೇಸ್ ಮಾಡುವುದು ಪೊಲೀಸರಿಗೆ ಕಷ್ಟವಾಗುತ್ತಿದೆ.

ಕಲಬುರಗಿ, ಏಪ್ರಿಲ್ 9: ಪೊಲೀಸರು ಚಾಪೆ ಕೆಳಗೆ ನುಸುಳಿದರೆ ಎಟಿಎಂಗಳನ್ನು ದರೋಡೆ ಮಾಡುವವರು ರಂಗೋಲಿ ಕೆಳಗೆ ನುಸುಳುತ್ತಾರೆ. ಬೀದರ್ ಎಟಿಎಂ ರಾಬರಿ ಮತ್ತು ಇಬ್ಬರು ಗಾರ್ಡ್​​ಗಳ ಕೊಲೆ ಪ್ರಕರಣ (Bidar robbery and murder case) ಇನ್ನೂ ಹಸಿಯಾಗಿರುವಾಗಲೇ, ಕಲಬುರಗಿಯ ಪೂಜಾರಿ ಚೌಕ್​ನಲ್ಲಿರುವ ಎಸ್​ಬಿಐ ಎಟಿಎಂ ಕಿಯಾಸ್ಕೊಂದರಿಂದ ದರೋಡೆಕೋರರು ₹18 ಲಕ್ಷ ದೋಚಿಕೊಂಡು ಪರಾರಿಯಾಗಿದ್ದಾರೆ. ದರೋಡೆ ಬೆಳಗಿನ ಜಾವ 3ಗಂಟೆ ಸುಮಾರಿಗೆ ನಡೆದಿದೆ ಮತ್ತು ಕಳ್ಳರು ತಮ್ಮ ಮುಖಗಳು ಎಟಿಎಂ ಕಿಯಾಸ್ಕ್ ಇರುವ ಕೋಣೆಯಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗದಿರಲು ಅವುಗಳಿಗೆ ಕಪ್ಪುಮಸಿಯನ್ನು ಸ್ಪ್ರೇ ಮಾಡಿದ್ದಾರೆ. ಕಿಯಾಸ್ಕ್​ ಓಪನ್ ಮಾಡಲು ಕಳ್ಳರು ಗ್ಯಾಸ್ ಕಟ್ಟರ್ ಬಳಸಿದ್ದಾರೆ.

ಇದನ್ನೂ ಓದಿ:  ಮಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆ ಯತ್ನ: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.