ಮಂಗಳೂರು: ಜಿಲ್ಲೆಗೆ ಸಿಎಂ ಭೇಟಿ ಮತ್ತು ಶುಕ್ರವಾರದ ನಮಾಜ್ ಗಮನದಲ್ಲಿಟ್ಟುಕೊಂಡೇ ಬ್ಯಾಂಕ್ ದರೋಡೆ!

ಅರುಣ್​ ಕುಮಾರ್​ ಬೆಳ್ಳಿ

Updated on: Jan 18, 2025 | 10:53 AM

ಜನರಿಂದ ಆಯ್ಕೆಯಾಗುವ ಜನಪ್ರತಿನಿಧಿಗಳಿಗೆ ಅಸೆಂಬ್ಲಿಗೆ ಹೋದ ನಂತರ ಆ ಪಾಟಿ ಭದ್ರತೆ ಯಾಕೆ ಬೇಕಾಗುತ್ತದೆ? ವೋಟು ಕೇಳುವಾಗ ಅವರಿಗೆ ಸೆಕ್ಯುರಿಟಿ ಬೇಕಾಗಿಲ್ಲ, ಗ್ರಾಮಗ್ರಾಮಗಳಿಗೆ ತೆರಳಿ ಕೈಮುಗಿದು ವೋಟು ಕೇಳುತ್ತಾರೆ. ಅಗ ಬೇಕಿಲ್ಲದ ಸೆಕ್ಯುರಿಟಿ ಗೆದ್ದಮೇಲೆ ಯಾಕೆ ಬೇಕು ಸ್ವಾಮಿ? ಯಾರನ್ನೂ ದೂಷಿಸುವ ಪ್ರಯತ್ನ ನಮ್ಮದಲ್ಲ, ಅದರೆ ಬೀದರ್ ಮತ್ತು ಮಂಗಳೂರು ದರೋಡೆಗಳ ನಂತರ ಜನಪ್ರತಿನಿಧಿಗಳು ಯೋಚಿಸಬೇಕಿದೆ.

ಮಂಗಳೂರು: ಉಳ್ಳಾಲದ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಶುಕ್ರವಾರ ನಡೆದ ಹಗಲು ದರೋಡೆಯನ್ನು ನಮ್ಮ ಜನಪ್ರತಿನಿಧಿಗಳು ಗಂಭೀರವಾಗಿ ಯೋಚಿಸಬೇಕಿದೆ. ನಮ್ಮ ಮಂಗಳೂರು ಪ್ರತಿನಿಧಿ ಹೇಳುವ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ದಕ್ಷಿಣ ಕನ್ನಡ ಜಿಲ್ಲೆ ಪ್ರವಾಸದಲ್ಲಿದ್ದ ಕಾರಣ ಮಂಗಳೂರು ಪೊಲೀಸ್ ವ್ಯವಸ್ಥೆಯನ್ನು ಅವರ ಬಂದೋಬಸ್ತ್ ಗಾಗಿ ನಿಯೋಜಿಸಲಾಗಿತ್ತು. ನಗರ ಮತ್ತು ಸುತ್ತಮುತ್ತ ಪ್ರದೇಶಗಳ ಪೊಲೀಸರೆಲ್ಲ ಸಿಎಂ ಹಿಂದೆ! ನಿನ್ನೆ ಶುಕ್ರವಾರದ ನಮಾಜ್ ನಿಮಿತ್ತ ಈ ನಿರ್ದಿಷ್ಟ ರಸ್ತೆಯಲ್ಲಿ ಜನರ ಓಡಾಟವೂ ಕಡಿಮೆಯಾಗಿತ್ತು. ಎರಡೂ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡೇ ಕಾರಿನಲ್ಲಿ ಬಂದಿದ್ದ 6 ದರೋಡೆಕೋರರು ಬ್ಯಾಂಕಿನ ಲೂಟಿ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಂಗಳೂರು: ಬೀದರ್ ಬಳಿಕ ಉಳ್ಳಾಲದಲ್ಲೂ ಹಾಡಹಗಲೇ ಬಂದೂಕು ತೋರಿಸಿ ಬ್ಯಾಂಕ್ ದರೋಡೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.