Big Bash League: ಬಿಗ್ ಬ್ಯಾಷ್ ಲೀಗ್​ನಲ್ಲಿ ಜೆಟ್​ಪ್ಯಾಕ್ ಶೋ: ಐಪಿಎಲ್​ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್

Rocketman Big Bash League: ಬಿಗ್ ಬ್ಯಾಷ್ ಲೀಗ್ 2023-24 ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಬ್ರಿಸ್ಬೇನ್ ಹೀಟ್ ಹಾಗೂ ಮೆಲ್ಬೋರ್ನ್​ ಸ್ಟಾರ್ಸ್​ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದ ಮಧ್ಯೆ ಬ್ರಿಸ್ಬೇನ್ ಹೀಟ್ ಜೆಟ್​ಪ್ಯಾಕ್ ಶೋ ಹಮ್ಮಿಕೊಂಡಿದ್ದು, ಇದನ್ನು ಕಂಡು ಅಭಿಮಾನಿಗಳು ಖುಷಿಗೊಂಡಿದ್ದಾರೆ.

Big Bash League: ಬಿಗ್ ಬ್ಯಾಷ್ ಲೀಗ್​ನಲ್ಲಿ ಜೆಟ್​ಪ್ಯಾಕ್ ಶೋ: ಐಪಿಎಲ್​ನಲ್ಲಿ ಇದೆಲ್ಲ ಇಲ್ಲ ಎಂದ ಫ್ಯಾನ್ಸ್
|

Updated on:Dec 08, 2023 | 7:28 AM

ಬಿಗ್ ಬ್ಯಾಷ್ ಲೀಗ್ 2023-24 (Big Bash League) ಅಬ್ಬರದೊಂದಿಗೆ ಪ್ರಾರಂಭವಾಗಿದೆ. ಆಸ್ಟ್ರೇಲಿಯಾದ ದೇಶೀಯ ಟಿ 20 ಲೀಗ್‌ಗೆ ಡಿಸೆಂಬರ್ 7 ರಂದು ಕ್ವಿಕ್ ಸ್ಟಾರ್ಟ್ ಸಿಕ್ಕಿತು. ಕ್ರಿಕೆಟ್‌ನ ಗುಣಮಟ್ಟದಲ್ಲಿ ಬಿಗ್ ಬ್ಯಾಷ್ ಲೀಗ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಡುವೆ ಹೆಚ್ಚಿನ ವ್ಯತ್ಯಾಸವಿಲ್ಲ. ಆದರೆ, ಬಿಗ್ ಬ್ಯಾಷ್ ಲೀಗ್​ನಲ್ಲಿ ಈ ಬಾರಿಯ ಉದ್ಘಾಟನಾ ಸಮಾರಂಭ ವಿಶೇಷವಾಗಿತ್ತು. ಬ್ರಿಸ್ಬೇನ್ ಹೀಟ್ ಮಿಡ್ ಇನ್ನಿಂಗ್ಸ್​ನಲ್ಲಿ ಜೆಟ್​ಪ್ಯಾಕ್ ಶೋ ಹಮ್ಮಿಕೊಂಡಿದ್ದು, ಇದನ್ನು ಕಂಡು ಅಭಿಮಾನಿಗಳು ಖುಷಿಗೊಂಡಿದ್ದಾರೆ. ಅಲ್ಲದೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ನೋಡಿ ಭಾರತೀಯ ಫ್ಯಾನ್ಸ್ ಐಪಿಎಲ್​ನಲ್ಲಿ ಇದೆಲ್ಲ ಕಂಡುಬರುವುದಿಲ್ಲ ಎಂದು ಹೇಳಿದ್ದಾರೆ. ರಾಕೆಟ್‌ಮ್ಯಾನ್ ಸೂಟ್‌ನಲ್ಲಿ ಕ್ರೀಡಾಂಗಣದ ಸುತ್ತಲೂ ಹಾರುವ ವ್ಯಕ್ತಿ, 2016/17 ಬಿಗ್ ಬ್ಯಾಷ್ ಲೀಗ್ ಋತುವಿನಲ್ಲೂ ಕಂಡುಬಂದಿದ್ದರು. ಇದು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಂಡಿದ್ದಕ್ಕಿಂತ ಭಿನ್ನವಾಗಿದೆ. ಐಪಿಎಲ್‌ 2023ರ ಉದ್ಘಾಟನಾ ಮತ್ತು ಸಮಾರೋಪ ಸಮಾರಂಭಗಳಲ್ಲಿ ಹಿನ್ನೆಲೆ ಗಾಯಕ ಅರಿಜಿತ್ ಸಿಂಗ್, ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ಅವರ ನೃತ್ಯ ಪ್ರದರ್ಶನವಿತ್ತು. ಈ ಬಾರಿ ಐಪಿಎಲ್ ಮಂಡಳಿ ಏನಾದರು ಹೊಸತನ ತರುತ್ತಾ ನೋಡಬೇಕು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 am, Fri, 8 December 23

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ