AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನೀರಿಗಾಗಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಗರಂ

ಕಾವೇರಿ ನೀರಿಗಾಗಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಗರಂ

ಮದನ್​ ಕುಮಾರ್​
|

Updated on: Jul 30, 2026 | 6:35 PM

Share

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇದೆಯಾ? ಕಾವೇರಿ ನೀರಿನ ಹೋರಾಟಕ್ಕೆ ಚಿತ್ರರಂಗದ ಎಲ್ಲರೂ ಬರುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ‘ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ’ ನಡೆಸಿದ ಸುದ್ದಿಗೋಷ್ಠಿ ವೇಳೆ ಈ ಪ್ರಶ್ನೆ ಕೇಳಿಬಂದಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಅವರು ಗರಂ ಆದರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮತ್ತೆ ತಕರಾರು ಆರಂಭ ಆಗಿದೆ. ಈ ವರ್ಷ ನಿರೀಕ್ಷೆಯ ಪ್ರಮಾಣದಲ್ಲಿ ಮಳೆ ಬಾರದೇ ಇರುವುದರಿಂದ ಕರ್ನಾಟಕದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಹೀಗಿರುವಾಗ ತಮಿಳುನಾಡಿನ ಜನರ ಕೃಷಿಗಾಗಿ ನೀರು ಬಿಡುಗಡೆ ಮಾಡುವುದು ಸಾಧ್ಯವಿಲ್ಲ ಎಂದು ಕನ್ನಡಪರ ಹೋರಾಟಗಾರರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ಕನ್ನಡ ಚಿತ್ರರಂಗ (Kannada Film Industry) ಕೂಡ ಬೆಂಬಲ ನೀಡುತ್ತಿದೆ. ಆದರೆ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇದೆಯಾ? ಎಲ್ಲರೂ ಈ ಹೋರಾಟಕ್ಕೆ ಬರುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ‘ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ’ ನಡೆಸಿದ ಸುದ್ದಿಗೋಷ್ಠಿ ವೇಳೆ ಈ ಪ್ರಶ್ನೆ ಕೇಳಿಬಂದಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಅವರು ಗರಂ ಆದರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us