AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹಾನ್ ನಾಯಕರ ಪಾತ್ರದ ಬಗ್ಗೆ ಚರ್ಚೆಯಾಗಬೇಕು: ಹೆಚ್ ಡಿ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹಾನ್ ನಾಯಕರ ಪಾತ್ರದ ಬಗ್ಗೆ ಚರ್ಚೆಯಾಗಬೇಕು: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 30, 2024 | 1:16 PM

Share

ಆದರೆ ಮಹಿಳೆಯರ ಬದುಕನ್ನ ಬೀದಿಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಮಾಡುವ ಆರೋಪ ಅರ್ಥವಾಗುವುದಿಲ್ಲ. ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಮತ್ತು ಪೆನ್ ಡ್ರೈವ್ ಗಳನ್ನು ನೋಡಿದರೆ ಪ್ರಜ್ವಲ್ ರೇವಣ್ಣನೇ ವಿಡಿಯೋ ಮಾಡಿರುವುದು ಸ್ಪಷ್ಟವಾಗುತ್ತದೆ, ಹಿಡನ್ ಕೆಮೆರಾದ ಪಾತ್ರವೇನೂ ಕಾಣದು, ಯಾವ ಆಧಾರದಲ್ಲಿ ಕುಮಾರಸ್ವಾಮಿ ಅರೋಪ ಮಾಡುತ್ತಿದ್ದಾರೆಯೋ?

ಹುಬ್ಬಳ್ಳಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy), ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು ಅದರಲ್ಲೂ ವಿಶೇಷವಾಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ದೂರಿದರು. ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿದ್ದರೆ ಶಿಕ್ಷೆ ಆಗೇ ಆಗುತ್ತದೆ ಅದರಲ್ಲಿ ಸಂಶಯವೇ ಬೇಡ, ಪ್ರಜ್ವಲ್ ತನ್ನ ಸಹೋದರ ರೇವಣ್ಣನ ಮಗ ಅಂತ ತಾನು ಪರವಹಿಸಿಕೊಂಡು ಮಾತಾಡಲ್ಲ, ಅದರೆ ಇದರ ಹಿಂದಿನ ಮತ್ತು ಮುಂದಿನ ರಾಜಕಾರಣ ಇದೆಯಲ್ಲ ಅದರ ಬಗ್ಗೆ ಚರ್ಚೆ ನಡೆಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು. ರಾಜ್ಯದ ಡಿಸಿಎಂ ಸಿಡಿ ಪೆನ್ ಡ್ರೈವ್ ಮಾಡಿಸುವುದರಲ್ಲಿ ನಿಷ್ಣಾತರು, ಈ ಪ್ರಕರಣದಲ್ಲಿ ಅವರ ಪಾತ್ರವೇನು ಅನ್ನೋದು ದೃಢಪಡಬೇಕು, ಮಹಿಳೆಯರಿಂದ ಪ್ರತಿಭಟನೆ ಮಾಡಿಸುತ್ತಿದ್ದಾರಲ್ಲ ಅದೆಲ್ಲದರ ಬಗ್ಗೆ ಚರ್ಚೆಯಾಗಬೇಕು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಆದರೆ ಮಹಿಳೆಯರ ಬದುಕನ್ನ ಬೀದಿಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಮಾಡುವ ಆರೋಪ ಅರ್ಥವಾಗುವುದಿಲ್ಲ. ಎಲ್ಲೆಡೆ ಹರಿದಾಡುತ್ತಿರುವ ಸುದ್ದಿ ಮತ್ತು ಪೆನ್ ಡ್ರೈವ್ ಗಳನ್ನು ನೋಡಿದರೆ ಪ್ರಜ್ವಲ್ ರೇವಣ್ಣನೇ ವಿಡಿಯೋ ಮಾಡಿರುವುದು ಸ್ಪಷ್ಟವಾಗುತ್ತದೆ, ಹಿಡನ್ ಕೆಮೆರಾದ ಪಾತ್ರವೇನೂ ಕಾಣದು, ಯಾವ ಆಧಾರದಲ್ಲಿ ಕುಮಾರಸ್ವಾಮಿ ಅರೋಪ ಮಾಡುತ್ತಿದ್ದಾರೆಯೋ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್ ಪ್ರಕರಣ: ದೇವೇಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಲು ಯತ್ನವೆಂದ ಕುಮಾರಸ್ವಾಮಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More