ಮಹಾರಾಷ್ಟ್ರ: ಚಿನ್ನಾಭರಣ ಅಂಗಡಿ ಮೇಲೆ ಐಟಿ ದಾಳಿ, ₹ 26 ಕೋಟಿ ನಗದು ಮತ್ತು ₹ 90 ಕೋಟಿ ಮೌಲ್ಯದ ಆಸ್ತಿಪತ್ರ ಪತ್ತೆ!

ಅರುಣ್​ ಕುಮಾರ್​ ಬೆಳ್ಳಿ

Updated on: May 27, 2024 | 10:46 AM

ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಕೊನೆಗೊಂಡಿದೆ. ಅದರರ್ಥ, ಇದು ಮತದಾರರಿಗೆ ಹಂಚಲು ತಂದಿದ್ದ ಹಣ ಆಗಿರಲಾರದು. ಹಣದ ಮೂಲ ಮತ್ತು ಆಸ್ತಿಗಳ ಕಾಗದ ಪತ್ರ ಯಾರ ಹೆಸರಲ್ಲಿವೆ ಅನ್ನೋದು ಇನ್ನೂ ಬಹಿರಂಗಗೊಳ್ಳಬೇಕಿದೆ.

ನಾಸಿಕ್ (ಮಹಾರಾಷ್ಟ್ರ): ಖಚಿತ ಮಾಹಿತಿಯೊಂದನ್ನಾಧರಿಸಿ ನೆರೆರಾಜ್ಯ ಮಹಾರಾಷ್ಟ್ರದ ನಾಸಿಕ್ (Nasik) ನಗರದಲ್ಲಿರುವ ಚಿನ್ನಾಭರಣ ಅಂಗಡಿಯೊಂದರ (jewelry shop) ಮೇಲೆ ದಾಳಿ ನಡೆಸಿರುವ ಆದಾಯ ತೆರಿಗೆ ಅಧಿಕಾರಿಗಳು ಭಾರೀ ಪ್ರಮಾಣದ ನಗದು ಆಸ್ತಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಮೂಲಗಳ ಪ್ರಕಾರ ನಾಸಿಕ್ ನಗರದಲ್ಲಿರುವ ಸುರಾನಾ ಜ್ಯೂಯೆಲ್ಲರ್ಸ್ (Surana Jewelers) ಅಂಗಡಿಯಿಂದ ₹ 26ಕೋಟಿ ನಗದು ಮತ್ತು ಸುಮಾರು ₹ 90 ಕೋಟಿ ಮೌಲ್ಯದ ಆಸ್ತಿಪಾಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಐಟಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದೃಶ್ಯಗಳಲ್ಲಿ ನಿಮಗೆ ಕಾಣುತ್ತಿರುವ ಹಾಗೆ ಚೀಲಗಳಲ್ಲಿ ತುಂಬಿಸಿಟ್ಟಿದ್ದ ನೋಟುಗಳ ಕಂತೆಗಳನ್ನು ಅಧಿಕಾರಿಗಳು ಟೇಬಲ್ ಮೇಲೆ ಜೋಡಿಸುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಕೊನೆಗೊಂಡಿದೆ. ಅದರರ್ಥ, ಇದು ಮತದಾರರಿಗೆ ಹಂಚಲು ತಂದಿದ್ದ ಹಣ ಆಗಿರಲಾರದು. ಹಣದ ಮೂಲ ಮತ್ತು ಆಸ್ತಿಗಳ ಕಾಗದ ಪತ್ರ ಯಾರ ಹೆಸರಲ್ಲಿವೆ ಅನ್ನೋದು ಇನ್ನೂ ಬಹಿರಂಗಗೊಳ್ಳಬೇಕಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನ ಓದಿ:  ಆಗ್ರಾ: ಶೂ ವ್ಯಾಪಾರಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ, 40 ಕೋಟಿ ರೂ. ನಗದು ಪತ್ತೆ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.