Anjanadri Betta: ಕೇವಲ ಎರಡು ತಿಂಗಳಲ್ಲಿ ಅಂಜನಾದ್ರಿ ಬೆಟ್ಟ ಹನುಮ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾಗಿರುವ ಕಾಣಿಕೆ ರೂ. 28,79,910!

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2023 | 6:01 PM

ಭಗವಾನ್ ಹನುಮಾನನ ಜನ್ಮಸ್ಥಳವೆಂದು ಪ್ರತೀತಿ ಹೊಂದಿರುವ ಅಂಜನಾದ್ರಿ ಬೆಟ್ಟಕ್ಕೆ ದೇಶದ ಎಲ್ಲ ಮೂಲೆಗಳಿಂದ ಭಕ್ತರು ಆಗಮಿಸುತ್ತಾರೆ.

ಕೊಪ್ಪಳ: ಜಿಲ್ಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ (Anjanadri Betta) ಮತ್ತು ಅಲ್ಲಿರುವ ಹನುಮನ ದೇವಸ್ಥಾನದ (Hanuman temple) ಖ್ಯಾತಿ ದೇಶದೆಲ್ಲೆಡೆ ಹಬ್ಬಿದೆ. ಹಾಗಾಗೇ, ಭಗವಾನ್ ಹನುಮಾನ್ ನ (Bahwan Hanuman) ಜನ್ಮಸ್ಥಳವೆಂದು ಪ್ರತೀತಿ ಹೊಂದಿರುವ ಅಂಜನಾದ್ರಿ ಬೆಟ್ಟಕ್ಕೆ ದೇಶದ ಎಲ್ಲ ಮೂಲೆಗಳಿಂದ ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಆಡಳಿತ ವರ್ಗ ಹೇಳುವ ಪ್ರಕಾರ ಕೇವಲ ಎರಡು ತಿಂಗಳಲ್ಲಿ ಹುಂಡಿ ತುಂಬುತ್ತಿದೆ. ಮುಜರಾಯಿ ಇಲಾಖೆ ಅಧಿಕಾರಗಳ ಸಮಕ್ಷಮ ಇಂದು ತುಂಬಿದ ಹುಂಡಿಯಿಂದ ಭಕ್ತರು ಹಾಕಿದ ಕಾಣಿಕೆಯನ್ನು ಹೊರತೆಗೆದು ಎಣಿಸಲಾಯಿತು. ಆಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ರೂ. 28,79,910

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.