ಡಿಕೆ ಶಿವಕುಮಾರ್ ಸ್ವಾಗತಿಸಲು ಬಂದಿದ್ದ ಉದ್ಯಮಿ ಸೂಟ್ಕೇಸ್ನಲ್ಲಿ ಹಣ ಪತ್ತೆ, ನೋಟಿಸ್ ನೀಡಿ ಹಣ ಸೀಜ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಬರಮಾಡಿಕೊಳ್ಳಲು ಬಂದಿದ್ದ ಉದ್ಯಮಿ ಕಾರನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದು, ಈ ವೇಳೆ ಸೂಟ್ಕೇಸ್ನಲ್ಲಿ ನಗದು ಹಣ ಪತ್ತೆಯಾಗಿದೆ.
ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬಂದಿದ್ದ ಆಪ್ತ ಉದ್ಯಮಿ ಯುಬಿ ಶೆಟ್ಟಿ ಸೂಟ್ಕೇಸ್ನಲ್ಲಿ ಹಣ ಪತ್ತೆಯಾಗಿದೆ. ಇಂದು(ಏಪ್ರಿಲ್ 23) ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಯುಬಿ ಶೆಟ್ಟಿ ಅವರು ಬೈಂದೂರಿನ ಹರೇ ಶಿರೂರು ಹೆಲಿಪ್ಯಾಡ್ ಬಳಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಯುಬಿ ಶೆಟ್ಟಿ ಆಗಮಿಸಿದ ಕಾರನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದು, ಈ ವೇಳೆ ಕಾರಿನಲ್ಲಿದ್ದ ಸೂಟ್ಕೇಸ್ ನಲ್ಲಿ 50,000 ರೂ. ನಗದು ಹಣ ಇರುವುದು ಪತ್ತೆಯಾಗಿದೆ. ಹಣವನ್ನ ಸೀಜ್ ಮಾಡಿಕೊಂಡಿರುವ ಅಧಿಕಾರಿಗಳು. ಯುಬಿ ಶೆಟ್ಟಿ ಅವರಿಗೆ ನೋಟಿಸ್ ನೀಡಿ ಜಾರಿ ಮಾಡಿದ್ದಾರೆ.
Published on: Apr 23, 2023 06:32 PM
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

