ಡಿಕೆ ಶಿವಕುಮಾರ್ ಸ್ವಾಗತಿಸಲು ಬಂದಿದ್ದ ಉದ್ಯಮಿ ಸೂಟ್ಕೇಸ್​ನಲ್ಲಿ ಹಣ ಪತ್ತೆ, ನೋಟಿಸ್ ನೀಡಿ ಹಣ ಸೀಜ್

Updated on: Apr 23, 2023 | 6:41 PM

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರನ್ನು ಬರಮಾಡಿಕೊಳ್ಳಲು ಬಂದಿದ್ದ ಉದ್ಯಮಿ ಕಾರನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದು, ಈ ವೇಳೆ ಸೂಟ್ಕೇಸ್​ನಲ್ಲಿ ನಗದು ಹಣ ಪತ್ತೆಯಾಗಿದೆ.

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಬಂದಿದ್ದ ಆಪ್ತ ಉದ್ಯಮಿ ಯುಬಿ ಶೆಟ್ಟಿ ಸೂಟ್ಕೇಸ್​ನಲ್ಲಿ ಹಣ ಪತ್ತೆಯಾಗಿದೆ. ಇಂದು(ಏಪ್ರಿಲ್ 23) ಡಿಕೆ ಶಿವಕುಮಾರ್ ಅವರನ್ನು ಸ್ವಾಗತಿಸಲು ಯುಬಿ ಶೆಟ್ಟಿ ಅವರು ಬೈಂದೂರಿನ ಹರೇ ಶಿರೂರು ಹೆಲಿಪ್ಯಾಡ್ ಬಳಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಯುಬಿ ಶೆಟ್ಟಿ ಆಗಮಿಸಿದ ಕಾರನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದು, ಈ ವೇಳೆ ಕಾರಿನಲ್ಲಿದ್ದ ಸೂಟ್ಕೇಸ್ ನಲ್ಲಿ 50,000 ರೂ. ನಗದು ಹಣ ಇರುವುದು ಪತ್ತೆಯಾಗಿದೆ. ಹಣವನ್ನ ಸೀಜ್ ಮಾಡಿಕೊಂಡಿರುವ ಅಧಿಕಾರಿಗಳು. ಯುಬಿ ಶೆಟ್ಟಿ ಅವರಿಗೆ ನೋಟಿಸ್ ನೀಡಿ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ​ ಬಂದ ಹೆಲಿಕಾಪ್ಟರ್ ಇಂಚಿಂಚೂ ಪರಿಶೀಲಿಸಿದ ಅಧಿಕಾರಿಗಳು, ಫೋಟೋಗಳನ್ನ ಹರಿಬಿಟ್ಟ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

Published on: Apr 23, 2023 06:32 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More