AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಚಿನ್ನದ ನಾಣ್ಯ ಸಿಗುತ್ತವೆ ಎಂಬ ವದಂತಿ;ರಾಷ್ಟ್ರೀಯ ಹೆದ್ದಾರಿ ಬಳಿ ಶೋಧ ಕಾರ್ಯದಲ್ಲಿ ತೊಡಗಿದ‌ ಜನ

ಚಿತ್ರದುರ್ಗ: ಚಿನ್ನದ ನಾಣ್ಯ ಸಿಗುತ್ತವೆ ಎಂಬ ವದಂತಿ;ರಾಷ್ಟ್ರೀಯ ಹೆದ್ದಾರಿ ಬಳಿ ಶೋಧ ಕಾರ್ಯದಲ್ಲಿ ತೊಡಗಿದ‌ ಜನ

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 24, 2023 | 4:45 PM

Share

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು(Molakalmuru) ತಾಲೂಕಿನ ಕೆಳಗಳಹಟ್ಟಿ ಗ್ರಾಮದ ಬಳಿ ಚಿನ್ನದ ನಾಣ್ಯ ಸಿಗುತ್ತದೆ ಎಂಬ ವದಂತಿ ಹರಡಿದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಬಳಿ ಬೆಳಗ್ಗೆಯಿಂದ ನೂರಾರು ಜನ ಜಮಾಯಿಸಿ ಶೋಧ ಕಾರ್ಯ ಆರಂಭಿಸಿದ ಘಟನೆ ನಡೆದಿದೆ.

ಚಿತ್ರದುರ್ಗ, ಡಿ.24: ಜನ ಮರಳೋ, ಜಾತ್ರೆ ಮರಳೋ ಎಂಬ ಗಾದೆ ಮಾತಿನಂತೆ ನಮ್ಮ ಜನ ಯಾರು ಏನೇ ಹೇಳಿದರೂ ಸಲೀಸಾಗಿ ನಂಬಿ ಬಿಡುತ್ತಾರೆ. ಅದರಂತೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು(Molakalmuru) ತಾಲೂಕಿನ ಕೆಳಗಳಹಟ್ಟಿ ಗ್ರಾಮದ ಬಳಿ ಚಿನ್ನದ ನಾಣ್ಯ ಸಿಗುತ್ತದೆ ಎಂಬ ವದಂತಿ ಹರಡಿದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ಬಳಿ ಬೆಳಗ್ಗೆಯಿಂದ ನೂರಾರು ಜನ ಜಮಾಯಿಸಿ ಶೋಧ ಕಾರ್ಯ ಆರಂಭಿಸಿದ ಘಟನೆ ನಡೆದಿದೆ. ನಕಲಿ ಚಿನ್ನದ ಮಾದರಿಯಲ್ಲಿರುವ ಕೆಲ ತುಣುಕು ಪತ್ತೆಯಾದ ಹಿನ್ನಲೆ ಇಲ್ಲಿ ಚಿನ್ನ ಸಿಗುತ್ತಿದೆ ಎಂಬ ವದಂತಿ ನಂಬಿದ ಜನರು ಶೋಧ‌ ಕಾರ್ಯದಲ್ಲಿ ತೊಡಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More