AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿಶತಕ ಬಾರಿಸಿದರೂ ಪೃಥ್ವಿ ಶಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿಲ್ಲ... ಆಮೇಲೇನಾಯ್ತು?

ದ್ವಿಶತಕ ಬಾರಿಸಿದರೂ ಪೃಥ್ವಿ ಶಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿಲ್ಲ… ಆಮೇಲೇನಾಯ್ತು?

ಝಾಹಿರ್ ಯೂಸುಫ್
|

Updated on: Oct 29, 2025 | 10:55 AM

Share

Chandigarh vs Maharashtra: ಮೊದಲ ಇನಿಂಗ್ಸ್​ನಲ್ಲಿನ 104 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 464 ರನ್​ಗಳ ಗುರಿ ಪಡೆದ ಚಂಡೀಗಢ್​​ ತಂಡವನ್ನು 359 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಮಹಾರಾಷ್ಟ್ರ ತಂಡ ಯಶಸ್ವಿಯಾಗಿದೆ. ಈ ಮೂಲಕ 144 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಚಂಡೀಗಢ್​​ನ ಸೆಕ್ಟೆರ್-16 ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿಯ ಗ್ರೂಪ್-ಬಿ ಪಂದ್ಯದಲ್ಲಿ ಮಹಾರಾಷ್ಟ್ರ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚಂಡೀಗಢ್​​ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮಹಾರಾಷ್ಟ್ರ ಪರ ರುತುರಾಜ್ ಗಾಯಕ್ವಾಡ್ 116 ರನ್ ಬಾರಿಸಿದ್ದರು. ಈ ಶತಕದ ನೆರವಿನೊಂದಿಗೆ ಮಹಾರಾಷ್ಟ್ರ ತಂಡ ಮೊದಲ ಇನಿಂಗ್ಸ್​ನಲ್ಲಿ 313 ರನ್ ಪೇರಿಸಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಚಂಡೀಗಢ್​​ ತಂಡ 209 ರನ್​ಗಳಿಗೆ ಆಲೌಟ್ ಆಗಿತ್ತು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಮಹಾರಾಷ್ಟ್ರ ಪರ ಪೃಥ್ವಿ ಶಾ 156 ಎಸೆತಗಳಲ್ಲಿ 29 ಫೋರ್ ಹಾಗೂ 5 ಸಿಕ್ಸರ್​ಗಳೊಂದಿಗೆ ಅಜೇಯ 222 ರನ್ ಬಾರಿಸಿದ್ದರು. ಈ ಮೂಲಕ ಮಹಾರಾಷ್ಟ್ರ ತಂಡ 3 ವಿಕೆಟ್ ನಷ್ಟಕ್ಕೆ 359 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು.

ಮೊದಲ ಇನಿಂಗ್ಸ್​ನಲ್ಲಿನ 104 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 464 ರನ್​ಗಳ ಗುರಿ ಪಡೆದ ಚಂಡೀಗಢ್​​ ತಂಡವನ್ನು 359 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಮಹಾರಾಷ್ಟ್ರ ತಂಡ ಯಶಸ್ವಿಯಾಗಿದೆ. ಈ ಮೂಲಕ 144 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನ ಬಳಿಕ ದ್ವಿಶತಕ ಬಾರಿಸಿದ ಪೃಥ್ವಿ ಶಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿರಲಿಲ್ಲ. ಬದಲಾಗಿ ಮೊದಲ ಇನಿಂಗ್ಸ್​ನಲ್ಲಿ ಶತಕ ಸಿಡಿಸಿ ಮಹಾರಾಷ್ಟ್ರ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ರುತುರಾಜ್ ಗಾಯಕ್ವಾಡ್​ಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ನೀಡಲಾಗಿತ್ತು.

ಆದರೆ ಈ ಪ್ರಶಸ್ತಿಯನ್ನು ರುತುರಾಜ್ ಗಾಯಕ್ವಾಡ್ ತನ್ನ ಸಹ ಆಟಗಾರ ಪೃಥ್ವಿ ಶಾ ಅವರೊಂದಿಗೆ ಹಂಚಿಕೊಳ್ಳುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು. ಇದೀಗ ಗಾಯಕ್ವಾಡ್ ಅವರ ನಡೆಗೆ ಬಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

 

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More