‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ತಿಳಿದಾಗ ನಿರ್ದೇಶಕ ಎಸ್. ನಾರಾಯಣ್ ಅವರು ನಂಬಲೇ ಇಲ್ಲ. ಆ ಬಗ್ಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದಿಲೀಪ್ ರಾಜ್ ಅವರ ಅಂತಿಮ ದರ್ಶನ ಪಡೆದ ಬಳಿಕ ಎಸ್. ನಾರಾಯಣ್ ಅವರು ಮಾತನಾಡಿದರು.
ಧಾರಾವಾಹಿ ಮತ್ತು ಸಿನಿಮಾಗಳ ಮೂಲಕ ಖ್ಯಾತಿ ಗಳಿಸಿದ್ದ ನಟ ದಿಲೀಪ್ ರಾಜ್ (Dileep Raj) ಅವರು ನಿಧನರಾಗಿದ್ದಾರೆ. ಅವರ ಅಗಲಿಕೆಯ ಸುದ್ದಿ ತಿಳಿದಾಗ ನಿರ್ದೇಶಕ ಎಸ್. ನಾರಾಯಣ್ ಅವರು ನಂಬಲೇ ಇಲ್ಲ. ಆ ಬಗ್ಗೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ದಿಲೀಪ್ ರಾಜ್ ಅವರ ಅಂತಿಮ ದರ್ಶನ ಪಡೆದ ಬಳಿಕ ಎಸ್. ನಾರಾಯಣ್ ಅವರು ಮಾತನಾಡಿದರು. ‘ಇಂದು ನನಗೆ ಶೂಟಿಂಗ್ ಇತ್ತು. ಮ್ಯಾನೇಜರ್ ಕರೆ ಮಾಡಿ ಶೂಟಿಂಗ್ ಕ್ಯಾನ್ಸಲ್ ಎಂದರು. ಯಾಕೆ ಅಂತ ಕೇಳಿದ್ದಕ್ಕೆ ದಿಲೀಪ್ ಹೋದರು ಅಂತ ಹೇಳಿದರು. ನಾನು ಅವರಿಗೆ ಬೈಯ್ದು ಫೋನ್ ಇಟ್ಟೆ. ಅಪ್ಪು ಅವರು ಹೋದಾಗ ನಾನು ನಂಬಿರಲಿಲ್ಲ. ಆಸ್ಪತ್ರೆಗೆ ಹೋಗಿ ಅವರ ಪಾರ್ಥೀವ ಶರೀರ ನೋಡಿದ ಮೇಲೆಯೇ ನಾನು ನಂಬಿದ್ದು. ದಿಲೀಪ್ ಕೂಡ ಹಾಗೆಯೇ ಆರೋಗ್ಯವಾಗಿ ಇದ್ದರು. ಅಂಥ ಮನುಷ್ಯನಿಗೆ ಸಾವು ಹೇಗೆ ಬರುತ್ತದೆ? ಅವರಿಗೆ ಯಾವುದೇ ದುರಭ್ಯಾಸ ಇರಲಿಲ್ಲ’ ಎಂದು ಎಸ್. ನಾರಾಯಣ್ (S Narayan) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ

