ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು ಎಚ್ಚರಿಕೆ
‘ಮುಂದಿನ ದಿನಗಳಲ್ಲಿ ಯಾವುದೇ ವ್ಯಕ್ತಿ ಇನ್ನೊಂದು ರಾಜ್ಯದ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆಯಿಂದ ಮಾತನಾಡಬೇಕು ಎಂಬುದಕ್ಕೆ ಇದೊಂದು ಪಾಠ. ನಾಡಿನ ಎಲ್ಲ ಸಾಹಿತಿಗಳು ಕೂಡ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿದ್ದಾರೆ. ಕಮಲ್ ಹಾಸನ್ ಅವರಿಂದ ಕನ್ನಡ ಭಾಷೆಗೆ ಆದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಸಾ.ರಾ. ಗೋವಿಂದು ಅವರು ಹೇಳಿದ್ದಾರೆ.
ಕಮಲ್ ಹಾಸನ್ (Kamal Haasan) ಅವರು ನಟಿಸಿರುವ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 5ರಂದು ರಿಲೀಸ್ ಆಗಬೇಕಿರುವ ಈ ಚಿತ್ರಕ್ಕೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡದ (Kannada) ಬಗ್ಗೆ ಕಮಲ್ ಹಾಸನ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಹಾಗಾಗಿ ಅವರು ಕ್ಷಮೆ ಕೇಳುವ ತನಕ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು (Sa Ra Govindu) ಹೇಳಿದ್ದಾರೆ. ‘ಹಂಚಿಕೆದಾರರು ಕೂಡ ನಮ್ಮ ಜೊತೆ ಇದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು. ಅವರ ಉದ್ಧಟತನವನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ಕ್ಷಮೆ ಕೇಳದ ಹೊರತು ಅವರು ಕರ್ನಾಟಕದಲ್ಲಿ ಹೇಗೆ ಸಿನಿಮಾದ ವ್ಯಾಪಾರ ಮಾಡುತ್ತಾರೆ ಎಂಬುದನ್ನು ನಾವು ನೋಡುತ್ತೇವೆ’ ಎಂದಿದ್ದಾರೆ ಸಾ.ರಾ. ಗೋವಿಂದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ರೀಲ್ಸ್ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಬಸ್ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ

