Saalumarada Thimmakka; ತಿಮ್ಮಕ್ಕರ ಆರೋಗ್ಯ ಸ್ಥಿರವಾಗಿದೆ, ಅವರ ಆರೋಗ್ಯದ ಬಗ್ಗೆ ವರದಿ ಮಾಡುವಾಗ ಸಂವೇದನೆ ಇರಲಿ: ಉಮೇಶ್ ವನಸಿರಿ, ತಿಮ್ಮಕ್ಕ ಮಗ

ಅರುಣ್​ ಕುಮಾರ್​ ಬೆಳ್ಳಿ

Updated on: Oct 05, 2023 | 6:32 PM

Saalumarada Thimmakka: ಕೆಲವರು ಉದ್ದೇಶಪೂರ್ವಕವಾಗಿ ತಮ್ಮ ಕುಟುಂಬಕ್ಕೆ ಕಿರುಕುಳ ನೀಡಲು ಪ್ರಯತ್ನಿಸುತ್ತಿದ್ದಾರೆ ಅಂತ ಭಾಸವಾಗುತ್ತಿದೆ, ಇದನ್ನು ನಿಲ್ಲಿಸುವಂತೆ ಉಮೇಶ್ ನೋವಿನಿಂದ ಮನವಿ ಮಾಡಿಕೊಂಡರು. ತಿಮ್ಮಕ್ಕನವರಿಗೆ ಉಸಿರಾಟದ ತೊಂದರೆಯಾಗಿದ್ದರಿಂದ ಬೇಲೂರು ಬಳಿಯಿರುವ ಬೆಳ್ಳೂರಿನಿಂದ ಅಂಬ್ಯುಲೆನ್ಸ್ ಒಂದರಲ್ಲಿ ಬೆಂಗಳೂರಿನ ಅಪೊಲ್ಲೋ ಆಸ್ಪತ್ರೆಗೆ ತರಲಾಯಿತು. ಹೃದಯದ ರಕ್ತನಾಳ ಬ್ಲಾಕ್ ಆಗಿದ್ದರಿಂದ ವೈದ್ಯರು ಸ್ಟೆಂಟ್ ಅಳಡಿಸಿದ್ದಾರೆ ಎಂದು ಉಮೇಶ್ ಹೇಳಿದರು.

ಬೆಂಗಳೂರು: ಹೃದ್ರೋಗ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ 112-ವರ್ಷ ವಯಸ್ಸಿನ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಆರೋಗ್ಯ ಸ್ಥಿರವಾಗಿದೆ ಮತ್ತು ತೀವ್ರ ನಿಗಾ ಘಟಕದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರ ಮಗ ಉಮೇಶ್ ವನಸಿರಿ ಮಾಧ್ಯಮದ ಪ್ರತಿನಿಧಿಗಳಿಗೆ ತಿಳಿಸಿದರು. ನಗರದ ಅಪೊಲ್ಲೋ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು ಮಧ್ಯಾಹ್ನ ಅವರಿಗೆ ಗಂಜಿ ಕುಡಿಸಿ ಹೊರಬಂದ ಬಳಿಕ ಉಮೇಶ್ ಸುದ್ದಿಗಾರರೊಂದಿಗೆ ಮಾತಾಡಿದರು. ತಿಮ್ಮಕ್ಕ ಚೇತರಿಸಿಕೊಳ್ಳುತ್ತಿರುವ ಹಂತದಲ್ಲಿ ಕೆಲ ಮಾಧ್ಯಮಗಳು ಶ್ರದ್ಧಾಂಜಲಿಯ ವರದಿಗಳನ್ನು ಪ್ರಸಾರ ಮಾಡಿದ್ದು ಉಮೇಶ್ ಅವರಲ್ಲಿ ತೀವ್ರ ಬೇಸರವನ್ನುಂಟು ಮಾಡಿದೆ. ಅವರು ಕೇವಲ ತಮ್ಮ ಕುಟುಂಬಕ್ಕೆ ಮಾತ್ರ ಅಮ್ಮನಲ್ಲ, ಇಡೀ ವಿಶ್ವ ಅವರನ್ನು ವೃಕ್ಷಮಾತೆ ಎಂದು ಆದರಿಸುತ್ತದೆ. ಕೆಲವರು ಉದ್ದೇಶಪೂರ್ವಕವಾಗಿ ತಮ್ಮ ಕುಟುಂಬಕ್ಕೆ ಕಿರುಕುಳ ನೀಡಲು ಪ್ರಯತ್ನಿಸುತ್ತಿದ್ದಾರೆ ಅಂತ ಭಾಸವಾಗುತ್ತಿದೆ, ಇದನ್ನು ನಿಲ್ಲಿಸುವಂತೆ ಉಮೇಶ್ ನೋವಿನಿಂದ ಮನವಿ ಮಾಡಿಕೊಂಡರು. ತಿಮ್ಮಕ್ಕನವರಿಗೆ ಉಸಿರಾಟದ ತೊಂದರೆಯಾಗಿದ್ದರಿಂದ ಬೇಲೂರು ಬಳಿಯಿರುವ ಬೆಳ್ಳೂರಿನಿಂದ ಅಂಬ್ಯುಲೆನ್ಸ್ ಒಂದರಲ್ಲಿ ಬೆಂಗಳೂರಿನ ಅಪೊಲ್ಲೋ ಆಸ್ಪತ್ರೆಗೆ ತರಲಾಯಿತು. ಹೃದಯದ ರಕ್ತನಾಳ ಬ್ಲಾಕ್ ಆಗಿದ್ದರಿಂದ ವೈದ್ಯರು ಸ್ಟೆಂಟ್ ಅಳಡಿಸಿದ್ದಾರೆ ಎಂದು ಉಮೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.