AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Video: ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಅಕ್ಷಯ್​ ಪಲ್ಲಮಜಲು​​
|

Updated on: Nov 17, 2025 | 5:15 PM

Share

ಶಬರಿಮಲೆ ದೇವಸ್ಥಾನದ ದ್ವಾರಪಾಲಕ ಪ್ರತಿಮೆಗಳಿಂದ 4.54 ಕೆಜಿ ಚಿನ್ನದ ಲೇಪನ ಕಾಣೆಯಾದ ಪ್ರಕರಣದಲ್ಲಿ SIT ತನಿಖೆ ಚುರುಕುಗೊಂಡಿದೆ. ವೈಜ್ಞಾನಿಕ ಪರೀಕ್ಷೆಗಳಿಗಾಗಿ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಈಗಾಗಲೇ ವಶದಲ್ಲಿದ್ದಾರೆ. ಈ ಬೃಹತ್ ಚಿನ್ನ ಕಳ್ಳತನದ ಮೂಲವನ್ನು ಪತ್ತೆಹಚ್ಚಲು ತನಿಖಾ ತಂಡ ಕಾರ್ಯಪ್ರವೃತ್ತವಾಗಿದೆ.

ಶಬರಿಮಲೆ ದೇವಸ್ಥಾನದ (Sabarimala Gold Plating Scam) ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಇದೀಗ ಎಸ್​​​ಐಟಿ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ದೇವಾಲಯದಲ್ಲಿ ವೈಜ್ಞಾನಿಕ ಪರೀಕ್ಷೆ ನಡೆಸುತ್ತಿದೆ. ಗರ್ಭಗುಡಿಯ ದ್ವಾರಪಾಲಕ ಶಿಲ್ಪ ಮತ್ತು ಚಿನ್ನದಿಂದ ಆವೃತವಾದ ಮರದ ಬಾಗಿಲಿನ ರಚನೆಯಿಂದ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ವಿಡಿಯೋವೊಂದು ಎಎನ್​​​ಐ ಹಂಚಿಕೊಂಡಿದೆ. ತನಿಖೆಯ ಭಾಗವಾಗಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಈಗಾಗಲೇ ಎಸ್​​​ಐಟಿ ವಶಪಡೆದುಕೊಂಡಿದ್ದು ತನಿಖೆಯನ್ನು ನಡೆಸುತ್ತಿದೆ. ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಗೆಯಲ್ಲಿದ್ದ ಬರೋಬ್ಬರಿ 4.54 ಕೆಜಿ ಲೇಪನ ಕಾಣೆಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ