ಡೆತ್ ನೋಟ್ ಸಚಿನ್ ಒಬ್ಬನೇ ಬರೆದಿಲ್ಲ, 3-4 ಜನರ ಫಿಂಗರ್ ಪ್ರಿಂಟ್ಸ್ ಪತ್ತೆಯಾಗಿವೆ: ಪ್ರಕಾಶ್ ಕಪನೂರ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 30, 2024 | 2:12 PM

ಸಚಿನ್ ಹಣ ನೀಡಿದ್ದರ ಬಗ್ಗೆ ಎಲ್ಲ ದಾಖಲೆ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್​ಗಳು ತಮ್ಮಲ್ಲಿವೆ ಎಂದು ಹೇಳುವ ಪ್ರಕಾಶ್ ತನ್ನ ಸಹೋದರ ಅವರಿಗೆ ಯಾವುದೇ ರೀತಿಯ ಕಿರುಕುಳ ನೀಡಿಲ್ಲ ಎನ್ನುತ್ತಾರೆ. ಕಳೆದ 2-3 ತಿಂಗಳಿಂದ ಹಣ ವಾಪಸ್ಸು ನೀಡುವಂತೆ ಅವರನ್ನು ಕೇಳಲಾಗುತ್ತಿತ್ತು, ಅದರೆ ಅವರು ಮಾತ್ರ ಮುಖ ತಪ್ಪಿಸಿಕೊಳ್ಳುತ್ತಿದ್ದರು ಮತ್ತು ತನ್ನ ಮೊಬೈಲ್ ಫೋನ್ ಸ್ವಿಚ್ಚಾಫ್ ಮಾಡಿದ್ದರು ಎಂದು ಪ್ರಕಾಶ್ ಹೇಳುತ್ತಾರೆ.

ಕಲಬುರಗಿ: ಭಾಲ್ಕಿಯ ಗುತ್ತಿಗೆದಾರ ಸಚಿನ್ ಪಾಂಚಾಳ್ ಬರೆದಿರುವ ಡೆತ್ ನೋಟ್ ಕುರಿತು ಅವರ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾಗುತ್ತಿರುವ ರಾಜು ಕಪನೂರ್ ಸಹೋದರ ಪ್ರಕಾಶ್ ಕಪನೂರ್ ಅನುಮಾನ ವ್ಯಕ್ತಪಡಿಸಿದ್ದು ಅದನ್ನು ಒಬ್ಬನೇ ಬರೆದಿಲ್ಲ 3-4 ಜನರ ಫಿಂಗರ್ ಪ್ರಿಂಟ್ಸ್ ಅದರ ಮೇಲೆ ಪತ್ತೆಯಾಗಿವೆ ಎನ್ನುತ್ತಾರೆ. ನಮ್ಮ ಕಲಬುರಗಿ ವರದಿಗಾರನೊದಿಗೆ ಮಾತಾಡಿರುವ ಪ್ರಕಾಶ್, ಸಚಿನ್ ಗೆ ತನ್ನ ಸಹೋದರ ಯಾವುದೋ ಕಾಮಗಾರಿಯ ಗುತ್ತಿಗೆ ಪಡೆಯಲು ಮತ್ತು ಈಎಂಡಿ ಪಾವತಿಸಲು 80 ಲಕ್ಷ ರೂ. ನೀಡಿದ್ದರು, ಅದರೆ ಸಚಿನ್ ಇಎಂಡಿ ಸಹ ಕಟ್ಟದೆ ಮೋಸ ಮಾಡಿದ್ದ, ಹಣ ವಾಪಸ್ಸು ನೀಡುವಂತೆ ಕೇಳಿದಾಗ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ ಎಂದು ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೇಧಾವಿಯಂತೆ ವರ್ತಿಸುವ ಪ್ರಿಯಾಂಕ್ ಖರ್ಗೆ ತಾನೊಂದು ನ್ಯಾಯಾಲಯ ಅಂದುಕೊಂಡಂತಿದೆ: ವಿಜಯೇಂದ್ರ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.