ಈ ಶಾಲೆಯಲ್ಲಿ ಪುನೀತ್​ ಫೋಟೋಗೆ ದಿನವೂ ಪೂಜೆ! ಪ್ರತಿ ವರ್ಷ 15 ಮಕ್ಕಳ ದತ್ತು ಸ್ವೀಕಾರ

ಪುನೀತ್​ ರಾಜ್​ಕುಮಾರ್​ ಸ್ಮರಣಾರ್ಥ ಉತ್ತಮ ಕೆಲಸಗಳನ್ನು ಜನರು ಮಾಡುತ್ತಿದ್ದಾರೆ. ಕೊಪ್ಪಳದ ಗಂಗಾವತಿ ತಾಲೂಕಿನ ಗಡ್ಡಿ ಸದ್ಧರ್ಮ ಶ್ರೀ ಗುರುಕುಲ ಶಾಲೆ ಕೂಡ ಅಪ್ಪುಗೆ ನಮನ ಸಲ್ಲಿಸುತ್ತಿದೆ.

ಈ ಶಾಲೆಯಲ್ಲಿ ಪುನೀತ್​ ಫೋಟೋಗೆ ದಿನವೂ ಪೂಜೆ! ಪ್ರತಿ ವರ್ಷ 15 ಮಕ್ಕಳ ದತ್ತು ಸ್ವೀಕಾರ
| Updated By: ಮದನ್​ ಕುಮಾರ್​

Updated on: Feb 04, 2022 | 9:27 AM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ನಿಧನರಾಗಿ ಮೂರು ತಿಂಗಳ ಕಳೆದಿದೆ. ಸಾಮಾಜಿಕ ಕೆಲಸಗಳ ಕಾರಣದಿಂದ ಅಪ್ಪು ಎಲ್ಲರಿಗೂ ಪ್ರೇರಣೆ ಆಗಿದ್ದಾರೆ. ಅನೇಕ ಕಡೆಗಳಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಗುತ್ತಿದೆ. ಕೊಪ್ಪಳದ (Koppal) ಗಂಗಾವತಿ ತಾಲೂಕಿನ ಗಡ್ಡಿ ಸದ್ಧರ್ಮ ಶ್ರೀ ಗುರುಕುಲ ಶಾಲಾ ಮಕ್ಕಳಿಂದ ಪ್ರತಿ ದಿನವೂ ಪುನೀತ್​ ರಾಜ್​ಕುಮಾರ್​ ಫೋಟೋಗೆ (Puneeth Rajkumar Photo) ಪುಷ್ಪ ನಮನ ಸಲ್ಲಿಸಲಾಗುತ್ತಿದೆ. ಅಪ್ಪು ಅವರ ಸಾಮಾಜಿಕ‌ ಕಳಕಳಿಯಿಂದ ಶ್ರೀಗಳು ಪ್ರೇರಣೆಗೊಂಡಿದ್ದಾರೆ. ಹಾಗಾಗಿ ಪ್ರತಿ ವರ್ಷ ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ 15 ಮಕ್ಕಳ ದತ್ತು ಸ್ವೀಕಾರಕ್ಕೆ ತೀರ್ಮಾನಿಸಲಾಗಿದೆ. ದತ್ತು ಮಕ್ಕಳಿಗೆ ಸದ್ಧರ್ಮ ಶಾಲೆ ಉಚಿತ ಶಿಕ್ಷಣ ನೀಡಲಿದೆ. ಆಟ-ಪಾಠಗಳ ಜೊತೆಗೆ ಬಾಲ್ಯದಲ್ಲಿಯೇ ಮಕ್ಕಳಿಗೆ ಶಿಕ್ಷಕರಿಂದ ಮಾನವೀಯ ಮೌಲ್ಯಗಳನ್ನು ಕಲಿಸಲಾಗುತ್ತಿದೆ. ಪುನೀತ್​ ಅವರ ಪ್ರೇರಣೆಯಿಂದ ಚಿಕ್ಕ ವಯಸ್ಸಿನಲ್ಲಿಯೇ ನೇತ್ರದಾನದ ಬಗ್ಗೆ ಮಕ್ಕಳು ಚಿಂತನೆ ನಡೆಸಿದ್ದಾರೆ. ಹೀಗೆ ಅನೇಕ ಕಡೆಗಳಲ್ಲಿ ಪುನೀತ್​ ಸ್ಮರಣಾರ್ಥ ಉತ್ತಮ ಕೆಲಸಗಳನ್ನು ಜನರು ಮಾಡುತ್ತಿದ್ದಾರೆ. ಪ್ರತಿ ದಿನ ಹೊಸ ಹೊಸ ಘಟನೆಗಳು ವರದಿ ಆಗುತ್ತಲೇ ಇವೆ.

ಇದನ್ನೂ ಓದಿ:

ಪುನೀತ್​​ ಮನೆಯಲ್ಲಿ ಅಪ್ಪು ಫೋಟೋ ಮುಂದೆ ಅಲ್ಲು ಅರ್ಜುನ್​ ಭಾವುಕ ಕ್ಷಣ; ವಿಡಿಯೋ ನೋಡಿ

‘ಅಪ್ಪು ನಮಗೆ ಬಿಟ್ಟು ಹೋದ ಆಸ್ತಿ ಇದು’; ಪುನೀತ್​ ಬಗ್ಗೆ ಸಹೋದರ ರಾಘಣ್ಣ ಭಾವುಕ ಮಾತು

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ