AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​ ನೋಡಲು ಬಂದ ಸಾಧು ಕೋಕಿಲ ಈ ರೀತಿ ರಿಯಾಕ್ಷನ್​ ಕೊಟ್ಟಿದ್ದು ಯಾಕೆ?

ದರ್ಶನ್​ ನೋಡಲು ಬಂದ ಸಾಧು ಕೋಕಿಲ ಈ ರೀತಿ ರಿಯಾಕ್ಷನ್​ ಕೊಟ್ಟಿದ್ದು ಯಾಕೆ?

ರಾಮು, ಆನೇಕಲ್​
| Edited By: |

Updated on: Jul 23, 2024 | 7:28 PM

Share

ದರ್ಶನ್​ ಅವರನ್ನು ಭೇಟಿ ಮಾಡಲು ಇಂದು (ಜುಲೈ 23) ಸಾಧು ಕೋಕಿಲ ಅವರು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಕ್ಯಾಮೆರಾ ನೋಡಿದಾಗ ಈ ರೀತಿ ಪ್ರತಿಕ್ರಿಯಿಸಿದರು. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಜೈಲು ವಾಸ ಅನುಭವಿಸುತ್ತಿದ್ದಾರೆ. ಅವರ ಭೇಟಿಯಾಗಿ ಆಪ್ತರು ಮತ್ತು ಕುಟುಂಬದವರು ಬರುತ್ತಿದ್ದಾರೆ.

ನಟ ದರ್ಶನ್​ ಅವರು ಚಿತ್ರರಂಗದ ಅನೇಕರ ಜೊತೆ ಒಡನಾಟ ಹೊಂದಿದ್ದಾರೆ. ಆದರೆ ಈಗ ಅವರು ರೇಣುಕಾ ಸ್ವಾಮಿಯ ಕೊಲೆ ಆರೋಪದಲ್ಲಿ ಜೈಲಿನಲ್ಲಿ ಇದ್ದಾರೆ. ದರ್ಶನ್​ ಅವರನ್ನು ನೋಡಲು ಪ್ರತಿ ದಿನ ಅವರ ಆಪ್ತರು ಬರುತ್ತಿದ್ದಾರೆ. ಈಗಾಗಲೇ ವಿನೋದ್ ರಾಜ್​, ವಿನೋದ್​ ಪ್ರಭಾಕರ್​, ತರುಣ್ ಸುಧೀರ್​ ಮುಂತಾದವರು ಬಂದು ಭೇಟಿ ಮಾಡಿದ್ದಾರೆ. ಕುಟುಂಬದವರು ಕೂಡ ಆಗಾಗ ಬಂದು ಕಾನೂನಿನ ಪ್ರಕ್ರಿಯೆ ಬಗ್ಗೆ ಮಾತನಾಡುತ್ತಿದ್ದಾರೆ. ಮಂಗಳವಾರ (ಜುಲೈ 23) ನಟ ಸಾಧು ಕೋಕಿಲ ಅವರು ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ದರ್ಶನ್​ ಭೇಟಿ ಮಾಡುವ ಸಲುವಾಗಿ ಜೈಲಿನ ಬಳಿ ಬಂದ ಅವರು ಮಾಧ್ಯಮಗಳ ಕ್ಯಾಮೆರಾ ಕಂಡು ಈ ರೀತಿ ರಿಯಾಕ್ಷನ್​ ನೀಡಿದ್ದಾರೆ. ಹತ್ತಿರದಿಂದ ಅವರ ವಿಡಿಯೋ ಚಿತ್ರಿಸಲು ಮುಂದಾಗಿದ್ದಕ್ಕೆ ಸಾಧು ಕೋಕಿಲ ಅವರು ಹೀಗೆ ಪ್ರತಿಕ್ರಿಯಿಸಿದರು. ಇಂದು ಅವರಿಗೆ ದರ್ಶನ್​ನ ಭೇಟಿಯಾಗಲು ಸಾಧ್ಯವಾಗಿಲ್ಲ. ಇನ್ನೊಂದಿನ ಬರುವುದಾಗಿ ಸಾಧು ಕೋಕಿಲ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More