‘ಕಾಂಗ್ರೆಸ್​ ಸದಸ್ಯತ್ವ ನಾನು ಪಡೆದಿಲ್ಲ; ಕಲಾವಿದರಿಗೆ ಪಕ್ಷ ಇಲ್ಲ’: ಮೇಕೆದಾಟು ಪಾದಯಾತ್ರೆ ಬಗ್ಗೆ ಸಾಧು ಕೋಕಿಲ ಮಾತು

‘ಮೇಕೆದಾಟು ಪಾದಯಾತ್ರೆ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ. ಇದಕ್ಕೆ ನಮ್ಮ ಪ್ರೋತ್ಸಾಹ ಇರಬೇಕು. ಇದು ನೀರಿಗಾಗಿ ಹೋರಾಟ’ ಎಂದು ಸಾಧು ಕೋಕಿಲ ಹೇಳಿದ್ದಾರೆ.

‘ಕಾಂಗ್ರೆಸ್​ ಸದಸ್ಯತ್ವ ನಾನು ಪಡೆದಿಲ್ಲ; ಕಲಾವಿದರಿಗೆ ಪಕ್ಷ ಇಲ್ಲ’: ಮೇಕೆದಾಟು ಪಾದಯಾತ್ರೆ ಬಗ್ಗೆ ಸಾಧು ಕೋಕಿಲ ಮಾತು
| Updated By: ಮದನ್​ ಕುಮಾರ್​

Updated on: Jan 09, 2022 | 11:31 AM

ಮೇಕೆದಾಟು (Mekedatu) ಯೋಜನೆ ಜಾರಿಗಾಗಿ ಕಾಂಗ್ರೆಸ್​ ನೇತೃತ್ವದಲ್ಲಿ ಪಾದಯಾತ್ರೆ ಆರಂಭ ಆಗಿದೆ. ಇದರಲ್ಲಿ ಅನೇಕರು ಭಾಗವಹಿಸುತ್ತಿದ್ದಾರೆ. ಕನ್ನಡ ಚಿತ್ರರಂಗದವರು ಕೂಡ ಪಾಲ್ಗೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್​ (DK Shivakumar) ಅವರು ಆಹ್ವಾನ ನೀಡಿರುವುದರಿಂದ ಸಾಕಷ್ಟು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ನಟ ಸಾಧು ಕೋಕಿಲ (Sadhu Kokila) ಅವರು ತಮ್ಮ ಬೆಂಬಲ ನೀಡಿದ್ದಾರೆ. ಮೇಕೆದಾಟು ಪಾದಯಾತ್ರೆಯಲ್ಲಿ (Mekedatu Padayatra) ಅವರು ಭಾಗಿಯಾಗಿದ್ದಾರೆ. ಈ ವೇಳೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ‘ಕಾವೇರಿ ನೀರು ನಮ್ಮ ಹಕ್ಕು. ನೀರಿನ ವಿಚಾರ ಬಂದಾಗ ನನಗೆ ಹುಮ್ಮಸ್ಸು. ನಾನು ಈವರೆಗೂ ಕಾಂಗ್ರೆಸ್​ ಸದಸ್ಯತ್ವ ಪಡೆದಿಲ್ಲ. ನಾವು ಕಲಾವಿದರು. ಕಲಾವಿದರು ಎಲ್ಲ ಕಡೆ ಸಲ್ಲುತ್ತಾರೆ. ಪಕ್ಷದ ಕೆಲಸ ಅವರವರಿಗೆ ಸೇರಿದ್ದು. ಆದರೆ ಈ ಪಾದಯಾತ್ರೆ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ. ಇದಕ್ಕೆ ನಮ್ಮ ಪ್ರೋತ್ಸಾಹ ಇರಬೇಕು. ಇದು ನೀರಿಗಾಗಿ ಹೋರಾಟ. ಮೇಕೆದಾಟು ಅಣೆಕಟ್ಟು ಕಟ್ಟುವವರೆಗೆ ಹೋರಾಟ ನಿಲ್ಲಬಾರದು’ ಎಂದು ಸಾಧು ಕೋಕಿಲ ಹೇಳಿದ್ದಾರೆ.

ಇದನ್ನೂ ಓದಿ:

ಸಾಧು ಕೋಕಿಲ ಅಂದ್ರೆ ಕಾಮಿಡಿ ಅಷ್ಟೇ ಅಲ್ಲ! ಅಪ್ರತಿಮ ಕಲಾವಿದನಿಗೆ ಇದೆ ಇನ್ನೂ 4 ಟ್ಯಾಲೆಂಟ್​ಗಳು

‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್​

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​