‘ಕಾಂಗ್ರೆಸ್ ಸದಸ್ಯತ್ವ ನಾನು ಪಡೆದಿಲ್ಲ; ಕಲಾವಿದರಿಗೆ ಪಕ್ಷ ಇಲ್ಲ’: ಮೇಕೆದಾಟು ಪಾದಯಾತ್ರೆ ಬಗ್ಗೆ ಸಾಧು ಕೋಕಿಲ ಮಾತು
‘ಮೇಕೆದಾಟು ಪಾದಯಾತ್ರೆ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ. ಇದಕ್ಕೆ ನಮ್ಮ ಪ್ರೋತ್ಸಾಹ ಇರಬೇಕು. ಇದು ನೀರಿಗಾಗಿ ಹೋರಾಟ’ ಎಂದು ಸಾಧು ಕೋಕಿಲ ಹೇಳಿದ್ದಾರೆ.
ಮೇಕೆದಾಟು (Mekedatu) ಯೋಜನೆ ಜಾರಿಗಾಗಿ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭ ಆಗಿದೆ. ಇದರಲ್ಲಿ ಅನೇಕರು ಭಾಗವಹಿಸುತ್ತಿದ್ದಾರೆ. ಕನ್ನಡ ಚಿತ್ರರಂಗದವರು ಕೂಡ ಪಾಲ್ಗೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ (DK Shivakumar) ಅವರು ಆಹ್ವಾನ ನೀಡಿರುವುದರಿಂದ ಸಾಕಷ್ಟು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ ನಟ ಸಾಧು ಕೋಕಿಲ (Sadhu Kokila) ಅವರು ತಮ್ಮ ಬೆಂಬಲ ನೀಡಿದ್ದಾರೆ. ಮೇಕೆದಾಟು ಪಾದಯಾತ್ರೆಯಲ್ಲಿ (Mekedatu Padayatra) ಅವರು ಭಾಗಿಯಾಗಿದ್ದಾರೆ. ಈ ವೇಳೆ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದಾರೆ. ‘ಕಾವೇರಿ ನೀರು ನಮ್ಮ ಹಕ್ಕು. ನೀರಿನ ವಿಚಾರ ಬಂದಾಗ ನನಗೆ ಹುಮ್ಮಸ್ಸು. ನಾನು ಈವರೆಗೂ ಕಾಂಗ್ರೆಸ್ ಸದಸ್ಯತ್ವ ಪಡೆದಿಲ್ಲ. ನಾವು ಕಲಾವಿದರು. ಕಲಾವಿದರು ಎಲ್ಲ ಕಡೆ ಸಲ್ಲುತ್ತಾರೆ. ಪಕ್ಷದ ಕೆಲಸ ಅವರವರಿಗೆ ಸೇರಿದ್ದು. ಆದರೆ ಈ ಪಾದಯಾತ್ರೆ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ. ಇದಕ್ಕೆ ನಮ್ಮ ಪ್ರೋತ್ಸಾಹ ಇರಬೇಕು. ಇದು ನೀರಿಗಾಗಿ ಹೋರಾಟ. ಮೇಕೆದಾಟು ಅಣೆಕಟ್ಟು ಕಟ್ಟುವವರೆಗೆ ಹೋರಾಟ ನಿಲ್ಲಬಾರದು’ ಎಂದು ಸಾಧು ಕೋಕಿಲ ಹೇಳಿದ್ದಾರೆ.
ಇದನ್ನೂ ಓದಿ:
ಸಾಧು ಕೋಕಿಲ ಅಂದ್ರೆ ಕಾಮಿಡಿ ಅಷ್ಟೇ ಅಲ್ಲ! ಅಪ್ರತಿಮ ಕಲಾವಿದನಿಗೆ ಇದೆ ಇನ್ನೂ 4 ಟ್ಯಾಲೆಂಟ್ಗಳು
‘ಸಾಧು ನನ್ನ ಕೈಗೆ ಸಿಕ್ಕಿದ್ದರೆ ಒಂದೆರಡು ಏಟು ಚೆನ್ನಾಗಿ ಬಿದ್ದಿರುತ್ತಿತ್ತು’: ರವಿಚಂದ್ರನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!

