ಚಿತ್ರರಂಗ ಕೇಳಿದ್ದನ್ನೆಲ್ಲ ಬಜೆಟ್​ನಲ್ಲಿ ಕೊಟ್ಟಿದ್ದಾರೆ: ಸಿದ್ದರಾಮಯ್ಯಗೆ ಸಾಧು ಕೋಕಿಲ ಧನ್ಯವಾದ

Updated on: Mar 07, 2025 | 8:02 PM

ಚಿತ್ರರಂಗವನ್ನು ಈಗ ಒಂದು ಉದ್ಯಮ ಎಂದು ಕರ್ನಾಟಕ ಸರ್ಕಾರ ಪರಿಗಣಿಸಿದೆ. ಹಾಗಾಗಿ ಅನೇಕ ಸವಲತ್ತುಗಳು ಚಿತ್ರರಂಗಕ್ಕೆ ಸಿಗಲಿವೆ. ಈ ಬಾರಿ ಕರ್ನಾಟಕ ಬಜೆಟ್​ನಲ್ಲಿ ಕನ್ನಡ ಚಿತ್ರರಂಗಕ್ಕೆ ಅನೇಕ ಕೊಡುಗೆಗಳನ್ನು ನೀಡಲಾಗಿದೆ. ಬಜೆಟ್ ಮಂಡನೆ ಬಳಿಕ ಸಾಧು ಕೋಕಿಲ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು 2025ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget 2025) ಮಂಡಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಅವರಿಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಅವರು ಧನ್ಯವಾದ ತಿಳಿಸಿದ್ದಾರೆ. ‘ಚಿತ್ರೋತ್ಸವದ ಉದ್ಘಾಟನೆ ದಿನ ನಾನು ಅನೌನ್ಸ್ ಮಾಡಿದ್ದನ್ನು ಈ ಬಜೆಟ್​ನಲ್ಲಿ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಕನ್ನಡ ಚಿತ್ರರಂಗಕ್ಕಾಗಿ ಸರ್ಕಾರದಿಂದ ಒಟಿಟಿ ಮಾಡಬೇಕು ಎಂದು ಕೇಳಿದ್ದೆ. ಅದನ್ನು ಕೂಡ ಓಕೆ ಮಾಡಿದ್ದಾರೆ’ ಎಂದು ಸಾಧು ಕೋಕಿಲ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More