AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

UPSC result 2025: ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Mar 07, 2026 | 12:09 PM

Share

ಯುಪಿಎಸ್‌ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಕೋಲಾರ, ಮಾರ್ಚ್​ 07: ಯುಪಿಎಸ್‌ಸಿ 2026ರ ಫಲಿತಾಂಶ ಪ್ರಕಟವಾಗಿದ್ದು, ಕೋಲಾರ ಜಿಲ್ಲೆಯ ಅಣ್ಣಿನಹಳ್ಳಿಯ ರೈತನ ಮಗ ಸಾಗರ್ 641ನೇ ಅಖಿಲ ಭಾರತ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ರಾಜ್ಯದಿಂದ 22ಕ್ಕೂ ಹೆಚ್ಚು ಅಭ್ಯರ್ಥಿಗಳು ಈ ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಶ್ರೇಣಿಗಳಿಗೆ ಆಯ್ಕೆಯಾಗುತ್ತಿದ್ದಾರೆ. ಸಾಗರ್ ಎ. ಅವರು ತಮ್ಮ ಸಾಧನೆಯನ್ನು ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಸಾಗರ್ ಮೂಲತಃ ಕೋಲಾರ ಜಿಲ್ಲೆಯ ನೆನಮನಹಳ್ಳಿ ನಿವಾಸಿಯಾಗಿದ್ದು, ಅವರ ತಂದೆ-ತಾಯಿ ಇಬ್ಬರೂ ರೈತರು. ಸಾಗರ್ ಅವರು ಈ ಹಿಂದೆ ವಿಧಾನಸೌಧದಲ್ಲಿ ಜೂನಿಯರ್ ಅಸಿಸ್ಟೆಂಟ್ ಆಗಿ ಮೂರು ವರ್ಷ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಸಬ್ ಇನ್ಸ್‌ಪೆಕ್ಟರ್ ಆಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದಾರೆ. ಏಳು ವರ್ಷಗಳ ಕಾಲ ಯುಪಿಎಸ್‌ಸಿ ಪರೀಕ್ಷೆಗೆ ಸತತವಾಗಿ ಅಧ್ಯಯನ ಮಾಡಿದ ಸಾಗರ್, ಇದು ತಮ್ಮ ಆರನೇ ಪ್ರಯತ್ನ ಎಂದು ತಿಳಿಸಿದ್ದಾರೆ. ಹಿಂದಿನ ಐದು ಪ್ರಯತ್ನಗಳಲ್ಲಿ ಪ್ರಿಲಿಮ್ಸ್ ಹಂತವನ್ನು ಸಹ ತೆರವುಗೊಳಿಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನ ಮೂರನ್ನೂ ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ. ಈ ಸಾಧನೆಗೆ ಕುಟುಂಬ, ಸ್ನೇಹಿತರು ಮತ್ತು ಮಾರ್ಗದರ್ಶಕರ ಬೆಂಬಲವೂ ಕಾರಣ ಎಂದು ಸಾಗರ್ ಹೇಳಿದ್ದಾರೆ. ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಸಿದ್ಧರಾಗಿರುವ ಸಾಗರ್, ಭವಿಷ್ಯದಲ್ಲಿ ಐಎಎಸ್ ಆಗುವ ಗುರಿ ಹೊಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us