‘ಚಿತ್ರರಂಗ ಇರುವವರೆಗೂ ಪವರ್ ಸ್ಟಾರ್ ಅವರೇ ನಂ.1’; ಅಪ್ಪು ಬಗ್ಗೆ ಗಣೇಶ್ ಅಭಿಮಾನದ ಮಾತು
‘ಸಖತ್’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ನಲ್ಲಿ ಪುನೀತ್ ರಾಜ್ಕುಮಾರ್ ಅವರಿಗೆ ನಮನ ಸಲ್ಲಿಸಲಾಯಿತು. ‘ಗೋಲ್ಡನ್ ಸ್ಟಾರ್’ ಗಣೇಶ್ ಅಭಿನಯದ ಈ ಸಿನಿಮಾ ನ.26ರಂದು ಬಿಡುಗಡೆ ಆಗಲಿದೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಅಗಲಿಕೆ ಇಡೀ ಸ್ಯಾಂಡಲ್ವುಡ್ಗೆ ನೋವು ತಂದಿದೆ. ಎಲ್ಲರೂ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಸಿನಿಮಾಗಳ ಸುದ್ದಿಗೋಷ್ಠಿ ಮತ್ತು ಪ್ರೀ-ರಿಲೀಸ್ ಕಾರ್ಯಕ್ರಮಗಳಲ್ಲಿ ಪುನೀತ್ಗೆ ನಮನ ಸಲ್ಲಿಸಲಾಗುತ್ತಿದೆ. ಅವರನ್ನು ನೆನಪು ಮಾಡಿಕೊಳ್ಳದೇ ಯಾವ ಕಾರ್ಯಕ್ರಮವನ್ನೂ ಪ್ರಾರಂಭಿಸಲು ಮನಸ್ಸಾಗುವುದಿಲ್ಲ. ಅಷ್ಟರಮಟ್ಟಿಗೆ ಅಪ್ಪು ಅಗಲಿಕೆ ಎಲ್ಲರನ್ನೂ ಕಾಡುತ್ತಿದೆ. ಸೋಮವಾರ (ನ.22) ನಡೆದ ‘ಸಖತ್’ (Sakath Kannada Movie)ಸಿನಿಮಾದ ಪ್ರೀ-ರಿಲೀಸ್ ಇವೆಂಟ್ನಲ್ಲೂ ಪುನೀತ್ಗೆ ನಮನ ಸಲ್ಲಿಸಲಾಯಿತು. ‘ಗೋಲ್ಡನ್ ಸ್ಟಾರ್’ ಗಣೇಶ್ (Golden Star Ganesh) ಅಭಿನಯದ, ಸಿಂಪಲ್ ಸುನಿ ನಿರ್ದೇಶನದ ಈ ಸಿನಿಮಾ ನ.26ರಂದು ಬಿಡುಗಡೆ ಆಗಲಿದೆ. ‘ಚಿತ್ರರಂಗ ಇರುವವರೆಗೂ ಪವರ್ ಸ್ಟಾರ್ ಅವರೇ ನಂ.1 ಆಗಿರುತ್ತಾರೆ’ ಎನ್ನುವ ಮೂಲಕ ‘ಸಖತ್’ ಚಿತ್ರದ ವೇದಿಕೆಯಲ್ಲಿ ಪುನೀತ್ ರಾಜ್ಕುಮಾರ್ ಬಗ್ಗೆ ಗಣೇಶ್ ಅವರು ಮನದ ಮಾತುಗಳನ್ನು ಹಂಚಿಕೊಂಡರು.
ಇದನ್ನೂ ಓದಿ:
ದೇವರಿಗೆ ಮುಡಿ ಕೊಟ್ಟು, ಪುನೀತ್ಗಾಗಿ ಹಾಡು ಹೇಳಿದ ನಟಿ ವಿಜಯಲಕ್ಷ್ಮೀ; ಇಲ್ಲಿದೆ ವಿಡಿಯೋ
2 ಮುಖ್ಯ ವಿಚಾರವನ್ನು ಪುಷ್ಕರ್ ಜತೆ ಚರ್ಚಿಸಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದ ಪುನೀತ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

