ಮೇಕೆದಾಟು ಪಾದಯಾತ್ರೆಯಲ್ಲಿ ದುನಿಯಾ ವಿಜಯ್ ಭಾಗಿ; ನೀರಿಗಾಗಿ ಹೋರಾಟಕ್ಕೆ ‘ಸಲಗ’ ಬೆಂಬಲ
ನಟ ದುನಿಯಾ ವಿಜಯ್ ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಅವರ ಪಾಲ್ಗೊಳ್ಳುವಿಕೆಯಿಂದ ಸ್ಟಾರ್ ಮೆರುಗು ಹೆಚ್ಚಿದೆ.
ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ನ ಇನ್ನಿತರೆ ನಾಯಕರ ಮುಂದಾಳತ್ವದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padayatra) ಇಂದು (ಜ.9) ಆರಂಭ ಆಗಿದೆ. ಮೇಕೆದಾಟು (Mekedatu) ಯೋಜನೆ ಜಾರಿ ಆಗಬೇಕು, ಮೇಕೆದಾಟು ಅಣೆಕಟ್ಟು ನಿರ್ಮಾಣ ಆಗಬೇಕು ಎಂಬ ಉದ್ದೇಶದಿಂದ ಈ ಪಾದಯಾತ್ರೆ ಮಾಡಲಾಗುತ್ತಿದೆ. ಇದರಲ್ಲಿ ಕನ್ನಡ ಚಿತ್ರರಂಗದ ಕಲಾವಿದರು ಕೂಡ ಭಾಗವಹಿಸಬೇಕು ಎಂದು ಡಿ.ಕೆ. ಶಿವಕುಮಾರ್ (DK Shivakumar) ಆಹ್ವಾನ ನೀಡಿದ್ದರು. ಕೆಲವು ಸ್ಟಾರ್ ಕಲಾವಿದರಿಗೆ ಖುದ್ದು ಫೋನ್ ಕರೆ ಮಾಡಿ ಆಹ್ವಾನ ನೀಡುವುದಾಗಿ ಅವರು ತಿಳಿಸಿದ್ದರು. ಅದರಂತೆ ಹಲವರಿಗೆ ಆಹ್ವಾನ ಹೋಗಿದೆ. ಆ ಹಿನ್ನೆಲೆಯಲ್ಲಿ ನಟ ದುನಿಯಾ ವಿಜಯ್ (Duniya Vijay) ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಅವರ ಪಾಲ್ಗೊಳ್ಳುವಿಕೆಯಿಂದ ಸ್ಟಾರ್ ಮೆರುಗು ಹೆಚ್ಚಿದೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಜತೆ ವಿಜಯ್ ಅವರಿಗೆ ಒಡನಾಟ ಇದೆ. ‘ಸಲಗ’ (Salaga Movie) ಚಿತ್ರದ ಪ್ರೀ-ರಿಲೀಸ್ ಇವೆಂಟ್ನಲ್ಲಿ ಈ ನಾಯಕರಿಬ್ಬರು ಭಾಗವಹಿಸಿದ್ದನ್ನು ನೆನಪಿಸಿಕೊಳ್ಳಬಹುದು.
ಇದನ್ನೂ ಓದಿ:
‘ಕಾಂಗ್ರೆಸ್ ಸದಸ್ಯತ್ವ ನಾನು ಪಡೆದಿಲ್ಲ; ಕಲಾವಿದರಿಗೆ ಪಕ್ಷ ಇಲ್ಲ’: ಮೇಕೆದಾಟು ಪಾದಯಾತ್ರೆ ಬಗ್ಗೆ ಸಾಧು ಕೋಕಿಲ ಮಾತು
‘ನಮ್ಮ ನೀರು, ನಮ್ಮ ಹಕ್ಕು’ ಧ್ಯೇಯದೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭ
Published on: Jan 09, 2022 02:28 PM
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

