ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ನ ಇನ್ನಿತರೆ ನಾಯಕರ ಮುಂದಾಳತ್ವದಲ್ಲಿ ಮೇಕೆದಾಟು ಪಾದಯಾತ್ರೆ (Mekedatu Padayatra) ಇಂದು (ಜ.9) ಆರಂಭ ಆಗಿದೆ. ಮೇಕೆದಾಟು (Mekedatu) ಯೋಜನೆ ಜಾರಿ ಆಗಬೇಕು, ಮೇಕೆದಾಟು ಅಣೆಕಟ್ಟು ನಿರ್ಮಾಣ ಆಗಬೇಕು ಎಂಬ ಉದ್ದೇಶದಿಂದ ಈ ಪಾದಯಾತ್ರೆ ಮಾಡಲಾಗುತ್ತಿದೆ. ಇದರಲ್ಲಿ ಕನ್ನಡ ಚಿತ್ರರಂಗದ ಕಲಾವಿದರು ಕೂಡ ಭಾಗವಹಿಸಬೇಕು ಎಂದು ಡಿ.ಕೆ. ಶಿವಕುಮಾರ್ (DK Shivakumar) ಆಹ್ವಾನ ನೀಡಿದ್ದರು. ಕೆಲವು ಸ್ಟಾರ್ ಕಲಾವಿದರಿಗೆ ಖುದ್ದು ಫೋನ್ ಕರೆ ಮಾಡಿ ಆಹ್ವಾನ ನೀಡುವುದಾಗಿ ಅವರು ತಿಳಿಸಿದ್ದರು. ಅದರಂತೆ ಹಲವರಿಗೆ ಆಹ್ವಾನ ಹೋಗಿದೆ. ಆ ಹಿನ್ನೆಲೆಯಲ್ಲಿ ನಟ ದುನಿಯಾ ವಿಜಯ್ (Duniya Vijay) ಅವರು ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಅವರ ಪಾಲ್ಗೊಳ್ಳುವಿಕೆಯಿಂದ ಸ್ಟಾರ್ ಮೆರುಗು ಹೆಚ್ಚಿದೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಜತೆ ವಿಜಯ್ ಅವರಿಗೆ ಒಡನಾಟ ಇದೆ. ‘ಸಲಗ’ (Salaga Movie) ಚಿತ್ರದ ಪ್ರೀ-ರಿಲೀಸ್ ಇವೆಂಟ್ನಲ್ಲಿ ಈ ನಾಯಕರಿಬ್ಬರು ಭಾಗವಹಿಸಿದ್ದನ್ನು ನೆನಪಿಸಿಕೊಳ್ಳಬಹುದು.
ಇದನ್ನೂ ಓದಿ:
‘ಕಾಂಗ್ರೆಸ್ ಸದಸ್ಯತ್ವ ನಾನು ಪಡೆದಿಲ್ಲ; ಕಲಾವಿದರಿಗೆ ಪಕ್ಷ ಇಲ್ಲ’: ಮೇಕೆದಾಟು ಪಾದಯಾತ್ರೆ ಬಗ್ಗೆ ಸಾಧು ಕೋಕಿಲ ಮಾತು
‘ನಮ್ಮ ನೀರು, ನಮ್ಮ ಹಕ್ಕು’ ಧ್ಯೇಯದೊಂದಿಗೆ ಮೇಕೆದಾಟು ಪಾದಯಾತ್ರೆ ಆರಂಭ
Published On - 2:28 pm, Sun, 9 January 22