ಕರ್ನಾಟಕದಲ್ಲಿ ‘ಸಲಗ’ ವಿಜಯಯಾತ್ರೆ; ಯಾರೆಲ್ಲಾ ಪಾಲ್ಗೊಳ್ಳಲಿದ್ದಾರೆ?
ವಿಜಯಯಾತ್ರೆ ಮಾಡೋಕೆ ಚಿತ್ರತಂಡ ಪ್ಲ್ಯಾನ್ ರೂಪಿಸಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಟ ದುನಿಯಾ ವಿಜಯ್, ಕಾಕ್ರೋಚ್ ಸುಧಿ ಸೇರಿ ಎಲ್ಲರೂ ಈ ಯಾತ್ರೆಯ ಭಾಗವಾಗಲಿದ್ದಾರೆ.
ಸಲಗ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ನಿರ್ದೇಶನದಲ್ಲಿ ದುನಿಯಾ ವಿಜಯ್ ಗೆದ್ದಿದ್ದಾರೆ. ಈಗ ಸಿನಿಮಾ ಗೆದ್ದ ಖುಷಿಯಲ್ಲಿ ಚಿತ್ರತಂಡ ರಾಜ್ಯಾದ್ಯಂತ ಗೆಲುವಿನ ಯಾತ್ರೆ ಮಾಡಲಿದೆ.
ವಿಜಯ ಯಾತ್ರೆ ಮಾಡೋಕೆ ಚಿತ್ರತಂಡ ಪ್ಲ್ಯಾನ್ ರೂಪಿಸಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್, ನಟ ದುನಿಯಾ ವಿಜಯ್, ಕಾಕ್ರೋಚ್ ಸುಧಿ ಸೇರಿ ಎಲ್ಲರೂ ಈ ಯಾತ್ರೆಯ ಭಾಗವಾಗಲಿದ್ದಾರೆ. ಇದರ ದಿನಾಂಕ ಶೀಘ್ರವೇ ಘೋಷಣೆ ಆಗಲಿದೆ.
‘ಸಲಗ’ ಚಿತ್ರದಲ್ಲಿ ಸಾಮ್ರಾಟ್ ಎಂಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಡಾಲಿ ಧನಂಜಯ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಹಲವು ದೃಶ್ಯಗಳಲ್ಲಿ ಅವರು ಆವರಿಸಿಕೊಂಡಿದ್ದಾರೆ. ‘ಟಗರು’ ಬಳಿಕ ಅವರಿಗೆ ಮತ್ತೊಮ್ಮೆ ಭರ್ಜರಿ ಜನಮೆಚ್ಚುಗೆ ಸಿಕ್ಕಿದೆ. ದುನಿಯಾ ವಿಜಯ್ ಮತ್ತು ಡಾಲಿ ಧನಂಜಯ ಅವರ ಮುಖಾಮುಖಿ ದೃಶ್ಯಗಳು ‘ಸಲಗ’ ಸಿನಿಮಾದಲ್ಲಿ ರಾರಾಜಿಸಿವೆ.
ಇದನ್ನೂ ಓದಿ: ‘ಸಲಗ’ ಚಿತ್ರದ ಸಾವಿತ್ರಿ-ಚಿನ್ನು ಲವ್ಸ್ಟೋರಿ ಬಗ್ಗೆ ಕಾಕ್ರೋಚ್ ಸುಧಿ ಫನ್ನಿ ಮಾತುಕತೆ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ ಪಲ್ಟಿ: ತಪ್ಪಿದ ಭಾರಿ ಅನಾಹುತ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ

