AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರಾದ ಬಳಿಕ ಮೊದಲ ಸಭೆಗೆ ಲ್ಯಾಪ್​​ಟಾಪ್ ಹಿಡಿದು ಬಂದ ಸಮರ್ಥ್, ಕುಡಿಯುವ ನೀರಿಗೆ ಹೊತ್ತು

ಶಾಸಕರಾದ ಬಳಿಕ ಮೊದಲ ಸಭೆಗೆ ಲ್ಯಾಪ್​​ಟಾಪ್ ಹಿಡಿದು ಬಂದ ಸಮರ್ಥ್, ಕುಡಿಯುವ ನೀರಿಗೆ ಹೊತ್ತು

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: May 15, 2026 | 5:47 PM

Share

ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಮರ್ಥ್ ಶಾಮನೂರು (Samarth Shamanur) ಮೊದಲ ಬಾರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ದಾವಣಗೆರೆ (Davanagere) ನಗರದ ಅರುಣಾ ಸರ್ಕಲ್ ಬಳಿ ಇರುವ ಪಶುಸಂಗೋಪನೆ ಇಲಾಖೆ ಸಭಾಂಗಣದಲ್ಲಿ ಸಭೆ ನಡೆದಿದ್ದು, ಅಧಿಕಾರಿಗಳು ನೀಡಿದ ಮಾಹಿತಿಯನ್ನು ಲ್ಯಾಪ್​ಟಾಪ್​​ನಲ್ಲಿ ದಾಖಲು ಮಾಡಿಕೊಂಡರು. ಇನ್ನು ಸಭೆಯಲ್ಲಿ ಪ್ರಮುಖವಾಗಿ ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವ ಬಗ್ಗೆ ಚರ್ಚಿಸಿದ್ದು,‌ ತಕ್ಷಣಕ್ಕೆ ನಾಲ್ಕು ಕಡೆ ಬೋರ್ ವೆಲ್ ಕೊರೆಯಿಸಲು ನಿರ್ಧರಿಸಲಾಗಿದೆ.

ದಾವಣಗೆರೆ, (ಮೇ 15): ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಮರ್ಥ್ ಶಾಮನೂರು (Samarth Shamanur) ಮೊದಲ ಬಾರಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಿನ್ನೆ (ಮೇ 14) ವಿಧಾನಸೌಧಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಮರ್ಥ್ ಮರುದಿನವೇ ಅಂದರೆ ಇಂದು (ಮೇ 15) ಅಧಿಕಾರಿಗಳ ಸಭೆ ನಡೆಸಿ ಗಮನಸೆಳೆದಿದ್ದಾರೆ. ದಾವಣಗೆರೆ (Davanagere) ನಗರದ ಅರುಣಾ ಸರ್ಕಲ್ ಬಳಿ ಇರುವ ಪಶುಸಂಗೋಪನೆ ಇಲಾಖೆ ಸಭಾಂಗಣದಲ್ಲಿ ಸಭೆ ನಡೆದಿದ್ದು, ಅಧಿಕಾರಿಗಳು ನೀಡಿದ ಮಾಹಿತಿಯನ್ನು ಲ್ಯಾಪ್​ಟಾಪ್​​ನಲ್ಲಿ ದಾಖಲು ಮಾಡಿಕೊಂಡರು. ಇನ್ನು ಸಭೆಯಲ್ಲೇ ಪ್ರಮುಖವಾಗಿ ಕುಡಿಯುವ ನೀರಿಗೆ ಹೊತ್ತು ಕೊಟ್ಟಿರುವುದು ವಿಶೇಷವಾಗಿದೆ.

ಹೌದು..ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎನ್ನುವ ಬಗ್ಗೆ ಚರ್ಚಿಸಿದ್ದು,‌   ತಕ್ಷಣಕ್ಕೆ ನಾಲ್ಕು ಕಡೆ ಬೋರ್ ವೆಲ್ ಕೊರೆಯಿಸಲು ನಿರ್ಧರಿಸಲಾಗಿದೆ. ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಸಮರ್ಥ್, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ನೀಡುವ ಮಾಹಿತಿ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವೆ ಎಂದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Doddamani
Basavaraj Doddamani

ಬಸವರಾಜ ದೊಡ್ಡಮನಿ ಟಿವಿ9 ಕನ್ನಡ ವರದಿಗಾರರಾಗಿದ್ದು, ವಿಶೇಷವಾಗಿ ದಾವಣಗೆರೆ ಜಿಲ್ಲಾ ಪ್ರಾದೇಶಿಕ ಸುದ್ದಿಗಳ ಮೇಲೆ ಕೇಂದ್ರೀಕರಿಸುತ್ತಾರೆ.

Read More