AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ ಆನೆಗಳಿಗೆ ಇಂದಿನಿಂದ ಮರಳು ಮೂಟೆ ತಾಲೀಮು ಆರಂಭ

ಮೈಸೂರು ದಸರಾ ಆನೆಗಳಿಗೆ ಇಂದಿನಿಂದ ಮರಳು ಮೂಟೆ ತಾಲೀಮು ಆರಂಭ

ರಾಮ್​, ಮೈಸೂರು
| Edited By: ವಿವೇಕ ಬಿರಾದಾರ|

Updated on:Sep 01, 2024 | 9:30 AM

Share

ವಿಶ್ವವಿಖ್ಯಾತ ಮೈಸೂರು ದಸರಾ-2024ಕ್ಕೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ಈಗಾಗಲೆ ಗಜಪಡೆ ಮೈಸೂರು ನಗರದಲ್ಲಿ ಪರೇಡ್​ ಮಾಡುತ್ತಿದೆ. ಆನೆಗಳಿಗೆ ಇಂದಿನಿಂದ (ಸೆ.01) ಮರಳು ಮೂಟೆ ತಾಲೀಮು ಆರಂಭವಾಗಿದೆ. ಆನೆಗಳಿಗೆ ಮರಳು ಮೂಟೆ ಹೊರಿಸುವ ಮುನ್ನ ಕೋಡಿ ಸೋಮೇಶ್ವರ ದೇವಸ್ಥಾನದ ಮುಂದೆ ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಶ್ವವಿಖ್ಯಾತ ಮೈಸೂರು ದಸರಾ-2024ಕ್ಕೆ ತಯಾರಿ ಜೋರಾಗಿಯೇ ನಡೆಯುತ್ತಿದೆ. ಈಗಾಗಲೆ ಗಜಪಡೆ ಮೈಸೂರು ನಗರದಲ್ಲಿ ಪರೇಡ್​ ಮಾಡುತ್ತಿದೆ. ಆನೆಗಳಿಗೆ ಇಂದಿನಿಂದ (ಸೆ.01) ಮರಳು ಮೂಟೆ ತಾಲೀಮು ಆರಂಭವಾಗಿದೆ. ಮರಳು ಮೂಟೆ ಹೊರಿಸುವ ಮೂಲಕ ಜಂಬೂ ಸವಾರಿಗೆ ಆನೆಗಳನ್ನು ತಯಾರಿ ಮಾಡಲಾಗುತ್ತಿದೆ. ಆನೆಗಳಿಗೆ ಮರಳು ಮೂಟೆ ಹೊರಿಸುವ ಮುನ್ನ ಕೋಡಿ ಸೋಮೇಶ್ವರ ದೇವಸ್ಥಾನದ ಮುಂದೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಮ್ದಾ, ತೊಟ್ಟಿಲು, ಹಗ್ಗ ಹಾಗೂ ಮರಳು ಮೂಟೆಗೂ ಕೂಡ ಪೂಜೆ ಮಾಡಲಾಯಿತು. ಡಿಸಿಎಫ್​ ಡಾ.ಐ.ಬಿ.ಪ್ರಭುಗೌಡ ನೇತೃತ್ವದಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯು, ಲಕ್ಷ್ಮೀ, ವರಲಕ್ಷ್ಮೀ ಆನೆಗಳಿಗೆ ಪೂಜೆ ಮಾಡಲಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 01, 2024 09:30 AM

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More