ಕುಟುಂಬದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು ಸುದೀಪ್, ಗುಡಿಯಲ್ಲಿ ಅಶ್ಲೇಷ ಹಾಗೂ ನಾಗ ಪ್ರತಿಷ್ಠೆ ಪೂಜೆ

ಸುದೀಪ್ ಅವರು ಪತ್ನಿ ಪ್ರಿಯಾ ರಾಧಾಕೃಷ್ಣನ್ ಮತ್ತು ಮಗಳು ಸಾನ್ವಿ ಜೊತೆ ಅವರು ಸುಬ್ರಹ್ಮಣ್ಯದ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಹಾಗೂ ನಾಗ ಪ್ರತಿಷ್ಠೆ ಪೂಜೆ ಮಾಡಿಸಿದರು.

ಕುಟುಂಬದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು ಸುದೀಪ್, ಗುಡಿಯಲ್ಲಿ ಅಶ್ಲೇಷ ಹಾಗೂ ನಾಗ ಪ್ರತಿಷ್ಠೆ ಪೂಜೆ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Dec 11, 2021 | 11:52 PM

ಕನ್ನಡ ಚಿತ್ರರಂಗದ ಖ್ಯಾತ ನಟ ಸುದೀಪ್ ಅವರು ಶನಿವಾರ ತಮ್ಮ ಬ್ಯೂಸಿ ಶೆಡ್ಯೂಲನಿಂದ ಬಿಡುವು ಮಾಡಿಕೊಂಡು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬದೊಂದಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಪತ್ನಿ ಪ್ರಿಯಾ ರಾಧಾಕೃಷ್ಣನ್ ಮತ್ತು ಮಗಳು ಸಾನ್ವಿ ಜೊತೆ ಅವರು ಸುಬ್ರಹ್ಮಣ್ಯದ ನರಸಿಂಹ ಸ್ವಾಮಿ ಮಠದಲ್ಲಿ ಆಶ್ಲೇಷ ಹಾಗೂ ನಾಗ ಪ್ರತಿಷ್ಠೆ ಪೂಜೆ ಮಾಡಿಸಿದರು. ಅದಾದ ಮೇಲೆ ಅವರ ಕುಟುಂಬ ಸುಬ್ರಹ್ಮಣ್ಯನ ದರ್ಶನ ಪಡೆಯಿತು. 

25 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವ 50-ವರ್ಷ ವಯಸ್ಸಿನ ಸುದೀಪ್ ವರ್ಷವಿಡೀ ಬ್ಯೂಸಿಯಾಗಿರುತ್ತಾರೆ. ಬಿಗ್ ಬಾಸ್ ಕನ್ನಡ ಆವೃತ್ತಿಯನ್ನು ಅವರು 2013ರಿಂದ ನಡೆಸಿಕೊಡುತ್ತಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಬಿಗ್ ಬಾಸ್ ಸೀಸನ್ ನಡೆಯುವಾಗ ಅವರ ಹೆಚ್ಚಿನ ಸಮಯ ಅದರಲ್ಲೇ ಹೋಗುತ್ತದೆ. ವಾರದ ದಿನಗಳಲ್ಲಿ ಅವರು ಶೂಟಿಂಗ್ ನಲ್ಲಿ ಪಾಲ್ಗೊಂಡು ವಾರಾಂತ್ಯವನ್ನು ಆ ಕಾರ್ಯಕ್ರಮಕ್ಕೆ ಮೀಸಲಿಡುತ್ತಾರೆ ಎಂದು ಹೇಳಲಾಗುತ್ತದೆ.

ಸುದೀಪ್ ಅವರ ಬಹು ನಿರೀಕ್ಷಿತ ‘ವಿಕ್ರಾಂತ್ ರೋಣ’ ಮುಂದಿನ ವರ್ಷ ಫೆಬ್ರುವರಿಯಲ್ಲಿ ತೆರೆ ಕಾಣಲಿದೆ. ಅದಲ್ಲದೆ ಅವರ ಮತ್ತೊಂದು ಚಿತ್ರ ‘ಕಬ್ಜಾ’ದ ಚಿತ್ರೀಕರಣ ನಡೆಯುತ್ತಿದೆ.

ಇದನ್ನೂ ಓದಿ:   Child Marriage: ರಾಜಸ್ಥಾನದಲ್ಲಿ ಇನ್ನೂ ಚಾಲ್ತಿಯಲ್ಲಿದೆ ಬಾಲ್ಯವಿವಾಹ; ಮಕ್ಕಳ ಮದುವೆಯ ಶಾಕಿಂಗ್ ವಿಡಿಯೋ ವೈರಲ್

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು