ಸಂಡೂರು ಉಪ ಚುನಾವಣೆ: ಪತಿ ತುಕಾರಾಂ ಜೊತೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ ಅನ್ನಪೂರ್ಣ ತುಕಾರಾಂ

ಅರುಣ್​ ಕುಮಾರ್​ ಬೆಳ್ಳಿ

Updated on: Nov 13, 2024 | 10:18 AM

ಸಂಡೂರು ಉಪ ಚುನಾವಣೆ: ಸಂಡೂರು ಶಾಸಕರಾಗಿದ್ದ ತುಕಾರಾಂ ಸಾರ್ವತ್ರಿಕ ಚುನಾವಣೆಗಳಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಅಯ್ಕೆಯಾಗಿದ್ದರಿಂದ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆ ಅನಿವಾರ್ಯವಾಗಿತ್ತು. ಅನ್ನಪೂರ್ಣ ಅವರ ಎದುರಾಳಿ ಬಿಜೆಪಿಯ ಬಂಗಾರು ಹಣಮಂತು ಆಗಿದ್ದಾರೆ.

ಬಳ್ಳಾರಿ: ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಗಾಗಿ ಇಂದು ಮತದಾನ ನಡೆಯುತ್ತಿದೆ, ಬೆಳಗಿನ ಚಳಿಯನ್ನು ಲೆಕ್ಕಿಸದೆ ಜನ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಂಡೂರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅನ್ನಪೂರ್ಣ ತುಕಾರಾಂ ತಮ್ಮ ಪತಿ ಮತ್ತು ಸಂಸದ ಈ ತುಕಾರಾಂ ಅವರೊಂದಿಗೆ ಪಟ್ಟಣದ ಇಂಜಿನಿಯರಿಂಗ್ ಉಪ ವಿಭಾಗ ಕಚೇರಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.