ಅಂದು ವಿನಯ್​ ಜತೆ ಜಗಳವಾಡಿ ಇಂದು ಲವ್​ ಎನ್ನುತ್ತಿರುವ ಸಂಗೀತಾ; ಶಾಕ್​ ಆದ ಕಾರ್ತಿಕ್​?

ದೀಪಾವಳಿ ಹಬ್ಬದ ಪ್ರಯುಕ್ತ ನೀಡಲಾಗಿದ್ದ ಟಾಸ್ಕ್​ ಸಮಯದಲ್ಲಿ ಅನೇಕ ಸತ್ಯಗಳು ಹೊರಬಿದ್ದಿವೆ. ಯಾರಿಗೆ ಯಾರ ಮೇಲೆ ಪ್ರೀತಿ ಇದೆ? ಯಾರಿಗೆ ಯಾರ ಮೇಲೆ ಕ್ರಶ್​ ಆಗಿದೆ ಎಂಬಿತ್ಯಾದಿ ವಿಚಾರಗಳನ್ನು ಬಿಗ್​ ಬಾಸ್​ ಸ್ಪರ್ಧಿಗಳು ಬಾಯಿ ಬಿಟ್ಟಿದ್ದಾರೆ. ಸಂಗೀತಾ ಶೃಂಗೇರಿ ಹೇಳಿದ ಮಾತು ಕೇಳಿ ಎಲ್ಲರಿಗೂ ಶಾಕ್​ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಅಂದು ವಿನಯ್​ ಜತೆ ಜಗಳವಾಡಿ ಇಂದು ಲವ್​ ಎನ್ನುತ್ತಿರುವ ಸಂಗೀತಾ; ಶಾಕ್​ ಆದ ಕಾರ್ತಿಕ್​?
|

Updated on:Nov 14, 2023 | 7:50 AM

ದೊಡ್ಮನೆಯೊಳಗೆ ಕಾರ್ತಿಕ್ ಮಹೇಶ್​ ಮತ್ತು ಸಂಗೀತಾ ಶೃಂಗೇರಿ (Sangeetha Sringeri) ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ತಮ್ಮಿಬ್ಬರ ನಡುವೆ ಪ್ರೀತಿ ಇದೆ ಎಂದು ಕಾರ್ತಿಕ್​ ಭಾವಿಸಿದ್ದಾರೆ. ಆದರೆ ಸಂಗೀತಾ ಅವರು ಅದನ್ನು ಸ್ನೇಹ ಎಂದು ಆಗಾಗ ಸ್ಪಷ್ಟಪಡಿಸುತ್ತಲೇ ಇದ್ದಾರೆ. ಭಾನುವಾರ (ನ.13) ಬಿಗ್​ ಬಾಸ್​ ನೀಡಿದ್ದ ಟಾಸ್ಕ್​ನಲ್ಲಿ ಸಖತ್​ ಫನ್​ ತುಂಬಿತ್ತು. ಈ ವೇಳೆ ಸಂಗೀತಾ ಶೃಂಗೇರಿ ಅವರು ಹೊಸ ವಿಚಾರ ಬಹಿರಂಗ ಮಾಡಿದ್ದಾರೆ. ‘ಸಂಗೀತಾ ಮತ್ತು ವಿನಯ್​ ಅವರು ಈ ಮನೆಯಲ್ಲಿ ಯಾವಾಗಲೂ ಪ್ರೀತಿ ಮಾಡುತ್ತಾರೆ’ ಎಂದು ಸ್ವತಃ ಸಂಗೀತಾ ಹೇಳಿದರು. ಇದನ್ನು ಕೇಳಿ ಕಾರ್ತಿಕ್​ ಮಹೇಶ್​ ಅವರಿಗೆ ಶಾಕ್​ ಆಗಿದೆ. ಬಿಗ್​ ಬಾಸ್​ ಮನೆಯ ಇತರೆ ಸದಸ್ಯರು ಕೂಡ ಹೋ ಎಂದು ಕಿರುಚಿದ್ದಾರೆ. ಕೆಲವೇ ದಿನಗಳ ಹಿಂದೆ ಸಂಗೀತಾ ಹಾಗೂ ವಿನಯ್​ ಗೌಡ (Vinay Gowda) ಹಾವು-ಮುಂಗುಸಿ ರೀತಿ ಕಿತ್ತಾಡಿದ್ದರು. ಈಗ ಸಂಗೀತಾ ಪ್ರೀತಿ ಎಂದಿದ್ದು ಕೇಳಿ ಎಲ್ಲರಿಗೂ ಶಾಕ್​ ಆಗಿದೆ. ಈ ಮೋಜಿನ ಟಾಸ್ಕ್​ ಸಮಯದಲ್ಲಿ ಅನೇಕ ಸತ್ಯಗಳು ಹೊರಬಿದ್ದಿವೆ. ಯಾರಿಗೆ ಯಾರ ಮೇಲೆ ಪ್ರೀತಿ ಇದೆ? ಯಾರಿಗೆ ಯಾರ ಮೇಲೆ ಕ್ರಶ್​ ಆಗಿದೆ ಎಂಬಿತ್ಯಾದಿ ವಿಚಾರಗಳನ್ನು ಬಿಗ್​ ಬಾಸ್​ (Bigg Boss Kannada) ಸ್ಪರ್ಧಿಗಳು ಬಾಯಿ ಬಿಟ್ಟಿದ್ದಾರೆ. ಕಲರ್ಸ್​ ಕನ್ನಡದಲ್ಲಿ ಪ್ರತಿ ರಾತ್ರಿ 9.30ಕ್ಕೆ ಬಿಗ್ ಬಾಸ್​ ಸಂಚಿಕೆ ಬಿತ್ತರವಾಗುತ್ತದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:41 am, Tue, 14 November 23

Follow us
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ