ಅಂದು ವಿನಯ್​ ಜತೆ ಜಗಳವಾಡಿ ಇಂದು ಲವ್​ ಎನ್ನುತ್ತಿರುವ ಸಂಗೀತಾ; ಶಾಕ್​ ಆದ ಕಾರ್ತಿಕ್​?

ಅಂದು ವಿನಯ್​ ಜತೆ ಜಗಳವಾಡಿ ಇಂದು ಲವ್​ ಎನ್ನುತ್ತಿರುವ ಸಂಗೀತಾ; ಶಾಕ್​ ಆದ ಕಾರ್ತಿಕ್​?
|

Updated on:Nov 14, 2023 | 7:50 AM

ದೀಪಾವಳಿ ಹಬ್ಬದ ಪ್ರಯುಕ್ತ ನೀಡಲಾಗಿದ್ದ ಟಾಸ್ಕ್​ ಸಮಯದಲ್ಲಿ ಅನೇಕ ಸತ್ಯಗಳು ಹೊರಬಿದ್ದಿವೆ. ಯಾರಿಗೆ ಯಾರ ಮೇಲೆ ಪ್ರೀತಿ ಇದೆ? ಯಾರಿಗೆ ಯಾರ ಮೇಲೆ ಕ್ರಶ್​ ಆಗಿದೆ ಎಂಬಿತ್ಯಾದಿ ವಿಚಾರಗಳನ್ನು ಬಿಗ್​ ಬಾಸ್​ ಸ್ಪರ್ಧಿಗಳು ಬಾಯಿ ಬಿಟ್ಟಿದ್ದಾರೆ. ಸಂಗೀತಾ ಶೃಂಗೇರಿ ಹೇಳಿದ ಮಾತು ಕೇಳಿ ಎಲ್ಲರಿಗೂ ಶಾಕ್​ ಆಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ದೊಡ್ಮನೆಯೊಳಗೆ ಕಾರ್ತಿಕ್ ಮಹೇಶ್​ ಮತ್ತು ಸಂಗೀತಾ ಶೃಂಗೇರಿ (Sangeetha Sringeri) ನಡುವೆ ಒಳ್ಳೆಯ ಬಾಂಧವ್ಯ ಬೆಳೆದಿದೆ. ತಮ್ಮಿಬ್ಬರ ನಡುವೆ ಪ್ರೀತಿ ಇದೆ ಎಂದು ಕಾರ್ತಿಕ್​ ಭಾವಿಸಿದ್ದಾರೆ. ಆದರೆ ಸಂಗೀತಾ ಅವರು ಅದನ್ನು ಸ್ನೇಹ ಎಂದು ಆಗಾಗ ಸ್ಪಷ್ಟಪಡಿಸುತ್ತಲೇ ಇದ್ದಾರೆ. ಭಾನುವಾರ (ನ.13) ಬಿಗ್​ ಬಾಸ್​ ನೀಡಿದ್ದ ಟಾಸ್ಕ್​ನಲ್ಲಿ ಸಖತ್​ ಫನ್​ ತುಂಬಿತ್ತು. ಈ ವೇಳೆ ಸಂಗೀತಾ ಶೃಂಗೇರಿ ಅವರು ಹೊಸ ವಿಚಾರ ಬಹಿರಂಗ ಮಾಡಿದ್ದಾರೆ. ‘ಸಂಗೀತಾ ಮತ್ತು ವಿನಯ್​ ಅವರು ಈ ಮನೆಯಲ್ಲಿ ಯಾವಾಗಲೂ ಪ್ರೀತಿ ಮಾಡುತ್ತಾರೆ’ ಎಂದು ಸ್ವತಃ ಸಂಗೀತಾ ಹೇಳಿದರು. ಇದನ್ನು ಕೇಳಿ ಕಾರ್ತಿಕ್​ ಮಹೇಶ್​ ಅವರಿಗೆ ಶಾಕ್​ ಆಗಿದೆ. ಬಿಗ್​ ಬಾಸ್​ ಮನೆಯ ಇತರೆ ಸದಸ್ಯರು ಕೂಡ ಹೋ ಎಂದು ಕಿರುಚಿದ್ದಾರೆ. ಕೆಲವೇ ದಿನಗಳ ಹಿಂದೆ ಸಂಗೀತಾ ಹಾಗೂ ವಿನಯ್​ ಗೌಡ (Vinay Gowda) ಹಾವು-ಮುಂಗುಸಿ ರೀತಿ ಕಿತ್ತಾಡಿದ್ದರು. ಈಗ ಸಂಗೀತಾ ಪ್ರೀತಿ ಎಂದಿದ್ದು ಕೇಳಿ ಎಲ್ಲರಿಗೂ ಶಾಕ್​ ಆಗಿದೆ. ಈ ಮೋಜಿನ ಟಾಸ್ಕ್​ ಸಮಯದಲ್ಲಿ ಅನೇಕ ಸತ್ಯಗಳು ಹೊರಬಿದ್ದಿವೆ. ಯಾರಿಗೆ ಯಾರ ಮೇಲೆ ಪ್ರೀತಿ ಇದೆ? ಯಾರಿಗೆ ಯಾರ ಮೇಲೆ ಕ್ರಶ್​ ಆಗಿದೆ ಎಂಬಿತ್ಯಾದಿ ವಿಚಾರಗಳನ್ನು ಬಿಗ್​ ಬಾಸ್​ (Bigg Boss Kannada) ಸ್ಪರ್ಧಿಗಳು ಬಾಯಿ ಬಿಟ್ಟಿದ್ದಾರೆ. ಕಲರ್ಸ್​ ಕನ್ನಡದಲ್ಲಿ ಪ್ರತಿ ರಾತ್ರಿ 9.30ಕ್ಕೆ ಬಿಗ್ ಬಾಸ್​ ಸಂಚಿಕೆ ಬಿತ್ತರವಾಗುತ್ತದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:41 am, Tue, 14 November 23

Follow us
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ