‘ಶ್ರೀ ಗಂಧದ ಗುಡಿ’ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ ಬುರ್ಲಿ
ಸಂಜನಾ ಬುರ್ಲಿ ಅವರು ಶ್ರೀ ಗಂಧದ ಗುಡಿ ಧಾರಾವಾಹಿಯ ಭಾಗ ಆಗಿದ್ದಾರೆ. ಅವರು ಧಾರಾವಾಹಿಯನ್ನು ಬಿಡಲು ಕಾರಣ ಏನು ಎಂಬುದನ್ನು ವಿವರಿಸಿದ್ದಾರೆ. ಅವರು ಬಿಡಲು ವಿವಾಹವೇ ಕಾರಣ ಎಂದು ಹೇಳಲಾಗುತ್ತಾ ಇದೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದನ್ನು ಸ್ವತಃ ಅವರೇ ಹಂಚಿಕೊಂಡಿದ್ದಾರೆ.
‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಸಂಜನಾ ಬುರ್ಲಿ ಅವರು ಹೊರ ಬಂದಿದ್ದಾರೆ. ಅವರು ಧಾರಾವಾಹಿಯನ್ನು ಬಿಟ್ಟಿದ್ದು ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ. ‘ನಾನು ವಿವಾಹ ಆಗುತ್ತಿರುವ ಕಾರಣದಿಂದ ಧಾರಾವಾಹಿಯಿಂದ ಹೊರ ಬಂದಿದ್ದೇನೆ’ ಎಂದು ಅವರು ಹೇಳಿದ್ದಾರೆ. ಹೊಸ ಪಾತ್ರಧಾರಿ, ಸ್ನೇಹಾ ಮಂಜುನಾಥ್ಗೂ ಪ್ರೀತಿ ತೋರಿಸುವಂತೆ ಅವರು ಕೋರಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us