ಕನ್ನಡ ಸಿನಿಮಾಗೆ ಬೆಳಗ್ಗೆ 9.30ಕ್ಕೆ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ

Updated on: Jun 17, 2025 | 9:13 PM

ಜೂನ್ 6ರಂದು ಬಿಡುಗಡೆ ಆದ ‘ಸಂಜು ವೆಡ್ಸ್​ ಗೀತಾ 2’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಈ ಸಿನಿಮಾಗೆ ಸೂಕ್ತ ಸಮಯದ ಶೋ ಸಿಗದೇ ಇರುವ ಸಾಧ್ಯತೆ ಇರುತ್ತದೆ. ಆ ಬಗ್ಗೆ ಸಿನಿಮಾದ ನಾಯಕ ಶ್ರೀನಗರ ಕಿಟ್ಟಿ ಮಾತನಾಡಿದ್ದಾರೆ.

ಇತ್ತೀಚೆಗೆ ಬಿಡುಗಡೆ ಆದ ‘ಸಂಜು ವೆಡ್ಸ್​ ಗೀತಾ 2’ (Sanju Weds Geetha 2) ಸಿನಿಮಾಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಆದರೆ ಮುಂದಿನ ದಿನಗಳಲ್ಲಿ ಈ ಚಿತ್ರಕ್ಕೆ ಥಿಯೇಟರ್ ಕೊರತೆ ಎದುರಾಗುವ ಸಾಧ್ಯತೆ ಇದೆ. ಆ ಬಗ್ಗೆ ಸಿನಿಮಾದ ನಾಯಕ ಶ್ರೀನಗರ ಕಿಟ್ಟಿ (Srinagra Kitty) ಅವರು ಮಾತನಾಡಿದ್ದಾರೆ. ‘ಇಲ್ಲಿಯ ತನಕ ಏನೂ ಸಮಸ್ಯೆ ಇಲ್ಲ. ನಾವು ಕೇಳಿದ ಸಮಯಕ್ಕೆ ಶೋ ಕೊಟ್ಟಿದ್ದಾರೆ. ಆದರೆ ನಾಡಿದ್ದು ಧನುಷ್, ಆಮಿರ್ ಖಾನ್ ಮುಂತಾದ ನಟರ ಸಿನಿಮಾಗಳು ಬಂದಾಗ ನಮ್ಮ ಸಿನಿಮಾಗೆ ಪ್ರೈಂ ಶೋಗಳನ್ನು ಬಿಟ್ಟು ಬೇರೆ ಸಮಯ ಕೊಡುತ್ತಾರೆ. ನಮಗೆ ಮಾರ್ನಿಂಗ್ ಶೋ ಕೊಡುತ್ತಾರೆ. ಬೆಳಗ್ಗೆ 9.30ಕ್ಕೆ ಶೋ ಕೊಟ್ಟರೆ ಜನ ಇನ್ನೂ ಎದ್ದಿರುವುದಿಲ್ಲ. ಆಗ ಯಾರು ಚಿತ್ರಮಂದಿರಕ್ಕೆ ಬರುತ್ತಾರೆ? ಹಾಗಾಗಿ ನಮಗೆ ಮೇಜರ್ ಶೋಗಳನ್ನು ಕೊಡಿ ಎಂಬುದು ನಮ್ಮ ಡಿಮ್ಯಾಂಡ್’ ಎಂದು ಶ್ರೀನಗರ ಕಿಟ್ಟಿ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More