Daily Devotional: ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?

Updated on: May 12, 2026 | 6:53 AM

ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧುನಿಕ ಜೀವನಶೈಲಿಯಲ್ಲಿ, ಅನೇಕ ಜನರು ವೈಯಕ್ತಿಕ ಮಹತ್ವಾಕಾಂಕ್ಷೆಗಳಿಗಾಗಿ ಗರ್ಭ ಧಾರಣೆಯನ್ನು ಮುಂದೂಡುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಮಕ್ಕಳನ್ನು ಸರಿಯಾದ ಸಮಯದಲ್ಲಿ ಪಡೆಯದಿದ್ದರೆ, ವೃದ್ಧಾಪ್ಯದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು.

ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧುನಿಕ ಜೀವನಶೈಲಿಯಲ್ಲಿ, ಅನೇಕ ಜನರು ವೈಯಕ್ತಿಕ ಮಹತ್ವಾಕಾಂಕ್ಷೆಗಳಿಗಾಗಿ ಗರ್ಭ ಧಾರಣೆಯನ್ನು ಮುಂದೂಡುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಮಕ್ಕಳನ್ನು ಸರಿಯಾದ ಸಮಯದಲ್ಲಿ ಪಡೆಯದಿದ್ದರೆ, ವೃದ್ಧಾಪ್ಯದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು.

ಜಾತಕದಲ್ಲಿ ಸಂತಾನ ಸ್ಥಾನವಾದ ಐದನೇ ಮನೆಯನ್ನು ನಿರ್ಲಕ್ಷಿಸಿದಾಗ, ಗುರು ಗ್ರಹದ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಇದು ದಂಪತಿಗಳಿಬ್ಬರ ಮೇಲೂ ಪರಿಣಾಮ ಬೀರಿ ಕಷ್ಟಗಳನ್ನು ತರಬಹುದು. ಸಂತಾನ ವಿಳಂಬದಿಂದಾಗಿ ಸರ್ಪ ಶಾಪ ಮತ್ತು ಸಂತಾನ ದೋಷಗಳು ಕಾಡುತ್ತವೆ. ಶನಿಯು ಐದನೇ ಮನೆಯನ್ನು ದೃಷ್ಟಿಸಿದಾಗ ಶಾಶ್ವತವಾಗಿ ಸಂತಾನವಿಲ್ಲದ ಪರಿಸ್ಥಿತಿ ಉಂಟಾಗಬಹುದು. ಗರ್ಭಪಾತವು ಮಂಗಳ ಗ್ರಹದ ಕೋಪಕ್ಕೆ ಕಾರಣವಾಗಿ ಪಿತೃ ದೋಷಗಳನ್ನು ತರಬಹುದು. ಆದ್ದರಿಂದ, ಸರಿಯಾದ ಸಮಯದಲ್ಲಿ ಸಂತಾನವನ್ನು ಹೊಂದುವುದು ದೈವಾನುಗ್ರಹ ಮತ್ತು ಜೀವನದ ಪರಿಪೂರ್ಣತೆಗೆ ಅತ್ಯಗತ್ಯ ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ.

 

 

Follow Us