Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್

ಆಯತಪ್ಪಿ ಬಿದ್ದಿದ್ದ ಬೈಕ್​ ಸವಾರ: ಗಾಯಾಳುಗೆ ನೆರವಾದ ಸಂತೋಷ್ ಲಾಡ್

ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 07, 2025 | 6:53 PM

ಲೋಕಾಪುರದ ಬಳಿ ಬೈಕ್ ಅಪಘಾತಕ್ಕೀಡಾದ ಬೈಕ್​ ಸವಾರನಿಗೆ ಸಚಿವ ಸಂತೋಷ್ ಲಾಡ್ ಸಹಾಯ ಮಾಡಿದ್ದಾರೆ. ಅವರು ತಮ್ಮ ವಾಹನದಲ್ಲಿ ಗಾಯಾಳುವನ್ನು ಲೋಕಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿದರು.

ಬಾಗಲಕೋಟೆ, ಫೆಬ್ರವರಿ 07: ಅಪಘಾತದಲ್ಲಿ ಗಾಯಗೊಂಡ ಗಾಯಾಳುಗೆ ಸಚಿವ ಸಂತೋಷ್​ ಲಾಡ್​ (Santosh Lad) ನೆರವಾಗಿರುವಂತಹ ಘಟನೆ ನಡೆದಿದೆ. ಜಿಲ್ಲೆ‌ಯ ಮುಧೋಳ ತಾಲೂಕಿನ ಲೋಕಾಪುರ ಗ್ರಾಮದ ಬಳಿ ಬೈಕ್​ ಸವಾರ ಆಯತಪ್ಪಿ ಬಿದ್ದಿದ್ದರು. ರಸ್ತೆಯಲ್ಲೇ ಸವಾರ ಸತೀಶ್ ನರಳಾಡುತ್ತಿದ್ದ. ಅದೇ ಮಾರ್ಗದಲ್ಲಿ ಕಾರ್ಮಿಕ ಸಚಿವ ಸಂತೋಷ್​ ಲಾಡ್ ಬರುತ್ತಿದ್ದರು. ತಮ್ಮ ಕಾರಿನಲ್ಲೇ ಲೋಕಾಪುರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ.  ಆ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.