ಮುಟ್ಟಿನ ವಿಚಾರದಲ್ಲಿ ಹೆಣ್ಣುಮಕ್ಕಳಲ್ಲಿ ಜಾಗೃತಿ ಮೂಡಿಸಿದ ನಟಿ ಸಪ್ತಮಿ ಗೌಡ
ರಾಜ್ಯ ಸರ್ಕಾರ ಆರಂಭಿಸಿರುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಸಪ್ತಮಿ ರಾಯಭಾರಿ ಆಗಿದ್ದಾರೆ. ಈ ಕಪ್ನ ಉಪಯೋಗ ಏನು ಎಂಬುದನ್ನು ಸಪ್ತಮಿ ಗೌಡ ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ.
ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾದಿಂದ (Kantara Movie) ಖ್ಯಾತಿ ಪಡೆದರು. ಅವರು ಈಗ ಹಿಂದಿಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಟಿಸಿದ್ದು, ಇದರ ರಿಲೀಸ್ಗಾಗಿ ಕಾದಿದ್ದಾರೆ. ಈಗ ಅವರು ಮಂಗಳೂರಿಗೆ ತೆರಳಿ ಹೆಣ್ಣುಮಕ್ಕಳಲ್ಲಿ ಮುಟ್ಟಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಆರಂಭಿಸಿರುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಸಪ್ತಮಿ ರಾಯಭಾರಿ ಆಗಿದ್ದಾರೆ. ಈ ಕಪ್ನ ಉಪಯೋಗ ಏನು ಎಂಬುದನ್ನು ಸಪ್ತಮಿ ಗೌಡ (Saptami Gowda) ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದಕ್ಕೆ ಚಾಲನೆ ನೀಡಿದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

