ಮುಟ್ಟಿನ ವಿಚಾರದಲ್ಲಿ ಹೆಣ್ಣುಮಕ್ಕಳಲ್ಲಿ ಜಾಗೃತಿ ಮೂಡಿಸಿದ ನಟಿ ಸಪ್ತಮಿ ಗೌಡ

Updated on: Sep 11, 2023 | 1:30 PM

ರಾಜ್ಯ ಸರ್ಕಾರ ಆರಂಭಿಸಿರುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಸಪ್ತಮಿ ರಾಯಭಾರಿ ಆಗಿದ್ದಾರೆ. ಈ ಕಪ್​ನ ಉಪಯೋಗ ಏನು ಎಂಬುದನ್ನು ಸಪ್ತಮಿ ಗೌಡ ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ.

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ ಸಿನಿಮಾದಿಂದ (Kantara Movie) ಖ್ಯಾತಿ ಪಡೆದರು. ಅವರು ಈಗ ಹಿಂದಿಯ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ನಟಿಸಿದ್ದು, ಇದರ ರಿಲೀಸ್​ಗಾಗಿ ಕಾದಿದ್ದಾರೆ. ಈಗ ಅವರು ಮಂಗಳೂರಿಗೆ ತೆರಳಿ ಹೆಣ್ಣುಮಕ್ಕಳಲ್ಲಿ ಮುಟ್ಟಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಆರಂಭಿಸಿರುವ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಸಪ್ತಮಿ ರಾಯಭಾರಿ ಆಗಿದ್ದಾರೆ. ಈ ಕಪ್​ನ ಉಪಯೋಗ ಏನು ಎಂಬುದನ್ನು ಸಪ್ತಮಿ ಗೌಡ (Saptami Gowda) ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಿತು. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದಕ್ಕೆ ಚಾಲನೆ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More