ಚಿರತೆ ಜತೆ ಫೈಟ್ ಮಾಡ್ತೀನಿ ಅಂದಿದ್ದ ಸತ್ಯಜಿತ್ಗೆ ಅಂಬರೀಷ್ ಬೈದಿದ್ರು
ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಕೈಕೊಟ್ಟಿದ್ದರಿಂದ ಸತ್ಯಜಿತ್ ಅವರು ನಟನೆಯಿಂದ ದೂರ ಉಳಿಯಬೇಕಾಯಿತು. ಇಹಲೋಕ ತ್ಯಜಿಸಿರುವ ಹಿರಿಯ ನಟನಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಕನ್ನಡ ಚಿತ್ರರಂಗದ ಬಹುಬೇಡಿಕೆಯ ಪೋಷಕ ನಟನಾಗಿದ್ದ ಸತ್ಯಜಿತ್ ಅವರು ಭಾನುವಾರ (ಅ.10) ಕೊನೆಯುಸಿರೆಳೆದರು. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಆ ಮೂಲಕ ಚಿತ್ರರಂಗದಲ್ಲಿ ಅಪಾರ ಅನುಭವ ಪಡೆದುಕೊಂಡಿದ್ದರು. ಚಂದನವನದ ಹಲವಾರು ಸ್ಟಾರ್ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಕೈಕೊಟ್ಟಿದ್ದರಿಂದ ಅವರು ನಟನೆಯಿಂದ ದೂರ ಉಳಿಯಬೇಕಾಯಿತು. ಇಹಲೋಕ ತ್ಯಜಿಸಿರುವ ಹಿರಿಯ ನಟನಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಈಗ ಸತ್ಯಜಿತ್ ಬಗ್ಗೆ ಹಾಸ್ಯನಟ ರಂಗಾಯಣ ರಘು ಮಾತನಾಡಿದ್ದಾರೆ. ‘ಅಂಬರೀಷ್ ಜತೆ ನಟಿಸುವಾಗ ಸತ್ಯಜಿತ್ ಅವರು ಚಿರತೆ ಜತೆ ಫೈಟ್ ಮಾಡೋಕೆ ಹೋಗಿದ್ದರು. ಈ ವೇಳೆ ಅಂಬರೀಷ್ ಬೈದಿದ್ದರು’ ಎಂದು ಹಳೆಯ ಘಟನೆ ನೆನಪಿಸಿಕೊಂಡಿದದ್ದಾರೆ ಅವರು.
ಇದನ್ನೂ ಓದಿ: ವರ್ಷದ ಹಿಂದೆ ವ್ಹೀಲ್ಚೇರ್ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್ ರಾಜ್ಕುಮಾರ್
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

