ಚಿರತೆ ಜತೆ ಫೈಟ್ ಮಾಡ್ತೀನಿ ಅಂದಿದ್ದ ಸತ್ಯಜಿತ್ಗೆ ಅಂಬರೀಷ್ ಬೈದಿದ್ರು
ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಕೈಕೊಟ್ಟಿದ್ದರಿಂದ ಸತ್ಯಜಿತ್ ಅವರು ನಟನೆಯಿಂದ ದೂರ ಉಳಿಯಬೇಕಾಯಿತು. ಇಹಲೋಕ ತ್ಯಜಿಸಿರುವ ಹಿರಿಯ ನಟನಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಕನ್ನಡ ಚಿತ್ರರಂಗದ ಬಹುಬೇಡಿಕೆಯ ಪೋಷಕ ನಟನಾಗಿದ್ದ ಸತ್ಯಜಿತ್ ಅವರು ಭಾನುವಾರ (ಅ.10) ಕೊನೆಯುಸಿರೆಳೆದರು. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಆ ಮೂಲಕ ಚಿತ್ರರಂಗದಲ್ಲಿ ಅಪಾರ ಅನುಭವ ಪಡೆದುಕೊಂಡಿದ್ದರು. ಚಂದನವನದ ಹಲವಾರು ಸ್ಟಾರ್ ಕಲಾವಿದರ ಸಿನಿಮಾಗಳಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಕೈಕೊಟ್ಟಿದ್ದರಿಂದ ಅವರು ನಟನೆಯಿಂದ ದೂರ ಉಳಿಯಬೇಕಾಯಿತು. ಇಹಲೋಕ ತ್ಯಜಿಸಿರುವ ಹಿರಿಯ ನಟನಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಈಗ ಸತ್ಯಜಿತ್ ಬಗ್ಗೆ ಹಾಸ್ಯನಟ ರಂಗಾಯಣ ರಘು ಮಾತನಾಡಿದ್ದಾರೆ. ‘ಅಂಬರೀಷ್ ಜತೆ ನಟಿಸುವಾಗ ಸತ್ಯಜಿತ್ ಅವರು ಚಿರತೆ ಜತೆ ಫೈಟ್ ಮಾಡೋಕೆ ಹೋಗಿದ್ದರು. ಈ ವೇಳೆ ಅಂಬರೀಷ್ ಬೈದಿದ್ದರು’ ಎಂದು ಹಳೆಯ ಘಟನೆ ನೆನಪಿಸಿಕೊಂಡಿದದ್ದಾರೆ ಅವರು.
ಇದನ್ನೂ ಓದಿ: ವರ್ಷದ ಹಿಂದೆ ವ್ಹೀಲ್ಚೇರ್ ಮೇಲೆ ಸತ್ಯಜಿತ್ ನಮ್ಮನೆಗೆ ಬಂದಿದ್ದರು; ಪುನೀತ್ ರಾಜ್ಕುಮಾರ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!

