ಶಿವಕುಮಾರ್ ಬೆಂಗಳೂರಿಂದ ಬೆಳಗಾವಿ ಬಂದರೂ ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಸತೀಶ್ ಜಾರಕಿಹೊಳಿ, ಲಕ್ಷ್ಮಿಹೆಬ್ಬಾಳ್ಕರ್ ಬರಲಿಲ್ಲ

ಶಿವಕುಮಾರ್ ಬೆಂಗಳೂರಿಂದ ಬೆಳಗಾವಿ ಬಂದರೂ ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಸತೀಶ್ ಜಾರಕಿಹೊಳಿ, ಲಕ್ಷ್ಮಿಹೆಬ್ಬಾಳ್ಕರ್ ಬರಲಿಲ್ಲ
|

Updated on: Oct 18, 2023 | 1:11 PM

ಸತೀಶ್ ಜಾರಕಿಹೊಳಿ ಮುನಿಸು ಅರ್ಥವಾಗುತ್ತದೆ ಆದರೆ ಲಕ್ಷ್ಮಿ ಮೇಡಂ ಯಾವ ಕಾರಣಕ್ಕೆ ಬಾರದೆ ಹೋದರೋ? ಜಿಲ್ಲೆಯಲ್ಲಿ ಬೇರೆ ಬೇರೆ ರಾಜಕೀಯ ವಿದ್ಯಮಾನಗಳು ಜರುಗುತ್ತಿವೆ. ಗೋಕಾಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬೆಂಗಳೂರಲ್ಲಿ ಮಂಗಳವಾರ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಬೆಳಗಾವಿ: ಬೆಂಗಳೂರಿಂದ ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಬಂದಿಳಿದ ಡಿಕೆ ಶಿವಕುಮಾರ್ (DK Shivakumar) ಅವರನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹಾರ್ದಿಕವಾಗಿ ಬರಮಾಡಿಕೊಂಡರು. ಕಾರ್ಯಕರ್ತರು ಸಡಗರದಿಂದ ಹಾರ ಮತ್ತು ಗಾಂಧಿ ಟೋಪಿಯನ್ನು ತೊಡಿಸಿ ಶಿವಕುಮಾರ್ ರನ್ನು ಸ್ವಾಗತಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣುತ್ತದೆ. ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಜೊತೆ ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿಯಾಗುರುವ ಪ್ರಕಾಶ್ ಹುಕ್ಕೇರಿ (Prakash Hukkeri) ಸಹ ಹಾಜರಿದ್ದರು. ಅದೆಲ್ಲ ಸರಿ, ಎಲ್ಲರಿಗಿಂತ ಮೊದಲು ವಿಮಾನ ನಿಲ್ದಾಣದಲ್ಲಿ ಹಾಜರಿರಬೇಕಿದ್ದವರೇ ನಾಪತ್ತೆ! ಹೌದು, ಶಿವಕುಮಾರ್ ಮೇಲೆ ಹಲವು ಕಾರಣಗಳಿಗಾಗಿ ಮುನಿಸಿಕೊಂಡಿರುವ ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಿಮಾನ ನಿಲ್ದಾಣದಲ್ಲಿ ಕಾಣಿಸಲಿಲ್ಲ. ಸತೀಶ್ ಜಾರಕಿಹೊಳಿ ಮುನಿಸು ಅರ್ಥವಾಗುತ್ತದೆ ಆದರೆ ಲಕ್ಷ್ಮಿ ಮೇಡಂ ಯಾವ ಕಾರಣಕ್ಕೆ ಬಾರದೆ ಹೋದರೋ? ಜಿಲ್ಲೆಯಲ್ಲಿ ಬೇರೆ ಬೇರೆ ರಾಜಕೀಯ ವಿದ್ಯಮಾನಗಳು ಜರುಗುತ್ತಿವೆ. ಗೋಕಾಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಬೆಂಗಳೂರಲ್ಲಿ ಮಂಗಳವಾರ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​