ಮೈಸೂರಲ್ಲಿ ಪರಮೇಶ್ವರ್ ಹೇಳಿದ್ದನ್ನೇ ಚಿಕ್ಕಮಗಳೂರಲ್ಲಿ ಸತೀಶ್ ಜಾರಕಿಹೊಳಿ ಹೇಳಿದರು!

ಅರುಣ್​ ಕುಮಾರ್​ ಬೆಳ್ಳಿ

Updated on: Oct 09, 2024 | 11:11 AM

ಕನ್ನಡಿಗರಿಗೆಲ್ಲ ಗೊತ್ತಿರುವ ಹಾಗೆ ಸಿದ್ದರಾಮಯ್ಯರನ್ನು ಬದಲಾಯಿಸುವ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಂಡರೆ ಸತೀಶ್ ಜಾರಕಿಹೊಳಿ ಅವರನ್ನು ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆಯಾದರೂ ಡಿಕೆ ಶಿವಕುಮಾರ್ ಅವರನ್ನು ಕನ್ವಿನ್ಸ್ ಮಾಡೋರು ಯಾರು?

ಚಿಕ್ಕಮಗಳೂರು: ನಿನ್ನೆ ರಾತ್ರಿ ಮೈಸೂರಲ್ಲಿ ಸಚಿವ ಹೆಚ್ ಸಿ ಮಹದೇವಪ್ಪ ಮನೆಯಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಭಾಗಿಯಾಗಿದ್ದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಗೃಹ ಸಚಿವ ಪರಮೇಶ್ವರ್ ಹೇಳಿದ್ದನ್ನೇ ಪುನರುಚ್ಛರಿಸಿ, ದಲಿತ ನಾಯಕರ ನಡುವೆ ಸಿಎಂ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ, ಕೇಳಿದ್ದನ್ನೇ ಕೇಳಬೇಡಿ, ಬೇರೆಯೇನಾದರೂ ಕೇಳಿ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮತ್ತೊಮ್ಮೆ ಮುನ್ನೆಲೆಗೆ ಬಂದ ದಲಿತ ಸಿಎಂ ಕೂಗು; ಮುಖ್ಯಮಂತ್ರಿ ರೇಸ್​ನಲ್ಲಿ ಸತೀಶ್ ಜಾರಕಿಹೊಳಿ ಹೆಸರು!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.