AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಷ್ಮೀ ಹೆಬ್ಬಾಳ್ಕರ್​​ ಪರ ನಿಂತ ಸತೀಶ್ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?

ಲಕ್ಷ್ಮೀ ಹೆಬ್ಬಾಳ್ಕರ್​​ ಪರ ನಿಂತ ಸತೀಶ್ ಜಾರಕಿಹೊಳಿ, ಹಾವು ಮುಂಗುಸಿಯಂತಿದ್ದವರು ಒಂದಾದ್ರಾ?

ಸಹದೇವ್​ ಮಾನೆ
| Edited By: |

Updated on: Aug 15, 2026 | 7:53 PM

Share

ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವ ಸ್ಥಾನ ಮೀಸಲಿರಿಸಲಾಗಿದೆ. ಸಚಿವ ಸಂಪುಟ ಪುನಾರಚನೆ ವೇಳೆ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಅವರಿಗೆ ಮಣೆ ಹಾಕಲಾಗಿತ್ತು. ಆದ್ರೆ, ಬದಲಾದ ಸನ್ನವೇಶಗಳಿಂದ ಅವರು ಸಚಿವರಾಗಿ ಅಧಿಕಾರಿ ಸ್ವೀಕಾರ ಮಾಡಲಿಲ್ಲ. ಹೀಗಾಗಿ ಅದೊಂದು ಸ್ಥಾನ ಖಾಲಿ ಉಳಿದಿದ್ದು, ಇದಕ್ಕೆ ಉಮಾಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ರೇಸ್​​ನಲ್ಲಿದ್ದಾರೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಪರವಾಗಿ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿರುವುದು ಅಚ್ಚರಿ ಮೂಡಿಸಿದೆ. ಹೌದು..ರಾಜ್ಯ ರಾಜಕಾರಣವೇ ಬೇರೆ ಬೆಳಗಾವಿ ರಾಜಕಾರಣವೇ ಬೇರೆ, ಬೆಳಗಾವಿಯಲ್ಲಿ ಕುಟುಂಬ ಕುಟುಂಬಗಳ ನಡುವಿನ ಜಿದ್ದಾಜಿದ್ದಿ ಇದೆ. ಲಕ್ಷ್ಮೀ ಹೆಬ್ಬಾಳ್ಕರ್​​​​​ ಹಾಗೂ ಜಾರಕಿಹಿಳಿ ಕುಟುಂಬ ಒಂದು ರೀತಿ ಹಾವು ಮುಂಗಸಿ ಇದ್ದಂತೆ. ಆದರೂ ಇದೀಗ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟಿಂಗ್ ಮಾಡಿದ್ದಾರೆ ಕುತೂಹಲ ಮೂಡಿಸಿದೆ.

ಬೆಳಗಾವಿ, (ಆಗಸ್ಟ್ 15): ಡಿಕೆ ಶಿವಕುಮಾರ್ ಸಂಪುಟದಲ್ಲಿ ಮಹಿಳಾ ಸಚಿವ ಸ್ಥಾನ ಮೀಸಲಿರಿಸಲಾಗಿದೆ. ಸಚಿವ ಸಂಪುಟ ಪುನಾರಚನೆ ವೇಳೆ ವಿಧಾನಪರಿಷತ್ ಸದಸ್ಯೆ ಗಾಯತ್ರಿ ಅವರಿಗೆ ಮಣೆ ಹಾಕಲಾಗಿತ್ತು. ಆದ್ರೆ, ಬದಲಾದ ಸನ್ನವೇಶಗಳಿಂದ ಅವರು ಸಚಿವರಾಗಿ ಅಧಿಕಾರಿ ಸ್ವೀಕಾರ ಮಾಡಲಿಲ್ಲ. ಹೀಗಾಗಿ ಅದೊಂದು ಸ್ಥಾನ ಖಾಲಿ ಉಳಿದಿದ್ದು, ಇದಕ್ಕೆ ಉಮಾಶ್ರೀ, ಲಕ್ಷ್ಮೀ ಹೆಬ್ಬಾಳ್ಕರ್ ರೇಸ್​​ನಲ್ಲಿದ್ದಾರೆ. ಇನ್ನು ಲಕ್ಷ್ಮೀ ಹೆಬ್ಬಾಳ್ಕರ್​ ಪರವಾಗಿ ಸತೀಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿರುವುದು ಅಚ್ಚರಿ ಮೂಡಿಸಿದೆ. ಹೌದು..ರಾಜ್ಯ ರಾಜಕಾರಣವೇ ಬೇರೆ ಬೆಳಗಾವಿ ರಾಜಕಾರಣವೇ ಬೇರೆ, ಬೆಳಗಾವಿಯಲ್ಲಿ ಕುಟುಂಬ ಕುಟುಂಬಗಳ ನಡುವಿನ ಜಿದ್ದಾಜಿದ್ದಿ ಇದೆ. ಲಕ್ಷ್ಮೀ ಹೆಬ್ಬಾಳ್ಕರ್​​​​​ ಹಾಗೂ ಜಾರಕಿಹಿಳಿ ಕುಟುಂಬ ಒಂದು ರೀತಿ ಹಾವು ಮುಂಗಸಿ ಇದ್ದಂತೆ. ಆದರೂ ಇದೀಗ ಸಚಿವ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಪರ ಬ್ಯಾಟಿಂಗ್ ಮಾಡಿದ್ದಾರೆ ಕುತೂಹಲ ಮೂಡಿಸಿದೆ.

Follow Us