AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Jun 17, 2025 | 8:01 PM

Share

ಸದ್ಯ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ವಿಧಾನಪರಿಷತ್​ ಗೆ ಸದಸ್ಯರ ನಾಮಕರಣ ಹಾಗೂ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳದ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕುವ ಬಗ್ಗೆ ಮಾತುಕತೆ ನಡೆದಿವೆ. ಈ ಸಂಬಂಧ ಖುದ್ದು ಸಿಎಂ ಸಿದ್ದರಾಮಯ್ಯನವರು ಮೊನ್ನೇ ದೆಹಲಿಗೆ ಹೋಗಿದ್ದ ವೇಳೆ ರಾಹುಲ್ ಗಾಂಧಿ ಚರ್ಚಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದರ ನಡುವೆ ಸಿಎಂ ಬದಲಾವಣೆ ಮಾತುಗಳು ಸಹ ಕೇಳಿಬರುತ್ತಿವೆ. ಇದರ ನಡುವೆ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ವಿಜಯನಗರ, (ಜೂನ್ 17): ಸದ್ಯ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಮುಖ್ಯವಾಗಿ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ವಿಧಾನಪರಿಷತ್​ ಗೆ ಸದಸ್ಯರ ನಾಮಕರಣ ಹಾಗೂ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳದ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಮಣೆ ಹಾಕುವ ಬಗ್ಗೆ ಮಾತುಕತೆ ನಡೆದಿವೆ. ಈ ಸಂಬಂಧ ಖುದ್ದು ಸಿಎಂ ಸಿದ್ದರಾಮಯ್ಯನವರು ಮೊನ್ನೇ ದೆಹಲಿಗೆ ಹೋಗಿದ್ದ ವೇಳೆ ರಾಹುಲ್ ಗಾಂಧಿ ಚರ್ಚಿಸಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಇದರ ನಡುವೆ ಸಿಎಂ ಬದಲಾವಣೆ ಮಾತುಗಳು ಸಹ ಕೇಳಿಬರುತ್ತಿವೆ. ಇದರ ನಡುವೆ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಹೊಸಪೇಟೆಯಲ್ಲಿ ಮಾತನಾಡಿರುವ ಸತೀಶ್ ಜಾರಕಿಹೊಳಿ, ನಮ್ಮ ಸಚಿವ ಸ್ಥಾನವನ್ನೇ ಉಳಿಸಿಕೊಳ್ಳೋದು ಕಷ್ಟ ಆಗಿದೆ. ಸಿಎಂ ಬದಲಾವಣೆ ಆಗ್ತಾರೆ ಅಂದ್ರೆ ನಾವೇನು ಹೇಳೋದು. ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ಅದು ಚರ್ಚೆಗೆ ಬಂದಾಗ ನೋಡೋಣ . ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದಿದ್ದಾರೆ.