ಬೆಳಗಾವಿ ಜಿಲ್ಲೆಯ ಹಳ್ಳಿಯಿಂದ ಹಳ್ಳಿಗೆ ಹೆಲಿಕಾಪ್ಟರ್ ನಲ್ಲಿ ಹಾರುತ್ತಾ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Jan 31, 2023 | 3:29 PM

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ ಅವರು ಪಕ್ಷ ಸಂಘಟನೆಯಲ್ಲಿ ಜೋರಾಗಿ ತೊಡಗಿದ್ದು ಓಡಾಟಕ್ಕೆ ಹೆಲಿಕಾಪ್ಟರ್ ಬಳಸುತ್ತಿದ್ದಾರೆ.

ಬೆಳಗಾವಿ: ರಾಜಕಾರಣಿಗಳು ಕಾರು ಜೀಪುಗಳಲ್ಲಿ ಓಡಾಡುವ ಕಾಲ ಮುಗಿದು ಹೋಗಿದೆ ಮಾರಾಯ್ರೇ. ಮೊದಲಾದರೆ ರಾಷ್ಟ್ರಮಟ್ಟದ ರಾಜಕಾರಣಿಗಳು (National leaders) ಅದೂ ಅವಸರದ ನಿಮಿತ್ತ ಹೆಲಿಕಾಪ್ಟರ್ ಗಳಲ್ಲಿ (Helicopter) ಓಡಾಡುತ್ತಿದ್ದರು. ಆದರೆ ಈಗ ರಾಜ್ಯಮಟ್ಟದ ನಾಯಕರು ಸಹ ಓಡಾಟಕ್ಕೆ ಚಾಪರ್ ಗಳನ್ನು ಕಾರುಗಳಂತೆ ಬಳಸುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ಸತೀಶ್ ಜಾರಕಿಹೊಳಿ (Satish Jarkiholi) ಅವರು ಪಕ್ಷ ಸಂಘಟನೆಯಲ್ಲಿ ಜೋರಾಗಿ ತೊಡಗಿದ್ದು ಓಡಾಟಕ್ಕೆ ವಿಡಿಯೋದಲ್ಲಿ ಕಾಣುತ್ತಿರುವ ಹಾಗೆ ಹೆಲಿಕಾಪ್ಟರ್ ಬಳಸುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಹೋಗಲು ಅವರು ಚಾಪರ್ ಅನ್ನೇ ಉಪಯೋಗಿಸುತ್ತಿದ್ದಾರಂತೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.