ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು ನಿನ್ನೆ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪ್ರಕರಣ 2009ರಿಂದ ನಡೆದಿದ್ದು ಹಿಂದೆಯೂ ಅವರನ್ನು ಅರೆಸ್ಟ್ ಮಾಡಲಾಗಿತ್ತು ಎಂದು ಹೇಳಿದರು. ಅಕ್ರಮ ಗಣಿಕೆಗಾರಿಕೆ ನಡೆಸಿದ ಮತ್ತು ಬೆಳೆಕೇರಿ ಪೋರ್ಟ್ನಲ್ಲಿ ಲಕ್ಷಾಂತರ ಟನ್ ಕಬ್ಬಿಣದ ಅದಿರು ಅಕ್ರಮವಾಗಿ ಸಂಗ್ರಹಿಟ್ಟ ಆರೋಪ ಅವರ ಮೇಲಿದೆ. ಪ್ರಕರಣದಲ್ಲಿ ವಿಚಾರಣೆ ಮುಂದುವರಿಸಿರುವ ನ್ಯಾಯಾಲಯವು ಸೈಲ್ ಮತ್ತು ಇತರ 9 ಜನರ ಬಂಧನಕ್ಕೆ ಆದೇಶ ನೀಡಿದೆ ಎಂದು ಪರಮೇಶ್ವರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಕೋರ್ಟ್ ಆದೇಶಿಸಿದರೆ ಬಸನಗೌಡ ಯತ್ನಾಳ್ರನ್ನು ಬಂಧಿಸಲಾಗುವುದು: ಪರಮೇಶ್ವರ್